3:00 PM Wednesday17 - December 2025
ಬ್ರೇಕಿಂಗ್ ನ್ಯೂಸ್
Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ…

ಇತ್ತೀಚಿನ ಸುದ್ದಿ

ಅಜ್ಜಿಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಭಾಗಶಃ ಕುಸಿತ; ವಾಲಿಕೊಂಡ ಗೇಟ್: ಟಾಯ್ಲೆಟ್ ಇನ್ ಡೇಂಜರ್

12/06/2024, 20:07

ಯಾದವ ಕುಲಾಲ್ ಅಗ್ರಬೈಲು ಬಿ.ಸಿ. ರೋಡ್

info.reporterkarnataka@gmail.com

ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಜತೆ ಇರುವ ಗೇಟ್ ಬುಧವಾರ ಮಧ್ಯಾಹ್ನ ಮಳೆಯೊಂದಿಗೆ ಬಲವಾದ ಗಾಳಿ ಬೀಸಿದ ಸಂದರ್ಭ ಭಾಗಶಃ ಕುಸಿದಿದೆ.


ಇದರಿಂದ ಗೇಟ್ ವಾಲಿಕೊಂಡಿದ್ದು, ಅದಕ್ಕೆ ಜೋಡಿಕೊಂಡು ಇರುವ ಕಲ್ಲುಗಳೂ ಸಡಿಲಗೊಂಡಿವೆ. ಈ ಗೇಟ್ ಪಕ್ಕದಲ್ಲೇ ಶಾಲಾ ಮಕ್ಕಳ ಶೌಚಾಲಯವಿದ್ದು, ಅಲ್ಲಿಗೆ ತೆರಳುವ ಪುಟ್ಟ ಮಕ್ಕಳು ಈ ಗೇಟ್ ಸನಿಹವೇ ತೆರಳುತ್ತಿದ್ದು, ಇದು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಇದೀಗ ಮಕ್ಕಳು ಜೀವಭಯದಲ್ಲೇ ತೆರಳಬೇಕಾಗಿದ್ದು, ಶೀಘ್ರ ದುರಸ್ತಿಯಾಗದಿದ್ದರೆ, ಅಪಾಯ ಉಂಟಾಗಬಹುದು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ತುರ್ತಾಗಿ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮತ್ತೊಮ್ಮೆ ಮನವಿ ಮಾಡಲಾಗಿದೆ. ಶಾಲಾ ಆವರಣ ಗೋಡೆಯ ಬಗ್ಗೆ ಇತ್ತೀಚೆಗಷ್ಟೇ ರಿಪೋರ್ಟರ್ ಕರ್ನಾಟಕ ವರದಿ ಮಾಡಿ ಎಚ್ಚರಿಕೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು