10:18 PM Tuesday1 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಅಜ್ಜಿಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಭಾಗಶಃ ಕುಸಿತ; ವಾಲಿಕೊಂಡ ಗೇಟ್: ಟಾಯ್ಲೆಟ್ ಇನ್ ಡೇಂಜರ್

12/06/2024, 20:07

ಯಾದವ ಕುಲಾಲ್ ಅಗ್ರಬೈಲು ಬಿ.ಸಿ. ರೋಡ್

info.reporterkarnataka@gmail.com

ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಜತೆ ಇರುವ ಗೇಟ್ ಬುಧವಾರ ಮಧ್ಯಾಹ್ನ ಮಳೆಯೊಂದಿಗೆ ಬಲವಾದ ಗಾಳಿ ಬೀಸಿದ ಸಂದರ್ಭ ಭಾಗಶಃ ಕುಸಿದಿದೆ.


ಇದರಿಂದ ಗೇಟ್ ವಾಲಿಕೊಂಡಿದ್ದು, ಅದಕ್ಕೆ ಜೋಡಿಕೊಂಡು ಇರುವ ಕಲ್ಲುಗಳೂ ಸಡಿಲಗೊಂಡಿವೆ. ಈ ಗೇಟ್ ಪಕ್ಕದಲ್ಲೇ ಶಾಲಾ ಮಕ್ಕಳ ಶೌಚಾಲಯವಿದ್ದು, ಅಲ್ಲಿಗೆ ತೆರಳುವ ಪುಟ್ಟ ಮಕ್ಕಳು ಈ ಗೇಟ್ ಸನಿಹವೇ ತೆರಳುತ್ತಿದ್ದು, ಇದು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಇದೀಗ ಮಕ್ಕಳು ಜೀವಭಯದಲ್ಲೇ ತೆರಳಬೇಕಾಗಿದ್ದು, ಶೀಘ್ರ ದುರಸ್ತಿಯಾಗದಿದ್ದರೆ, ಅಪಾಯ ಉಂಟಾಗಬಹುದು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ತುರ್ತಾಗಿ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮತ್ತೊಮ್ಮೆ ಮನವಿ ಮಾಡಲಾಗಿದೆ. ಶಾಲಾ ಆವರಣ ಗೋಡೆಯ ಬಗ್ಗೆ ಇತ್ತೀಚೆಗಷ್ಟೇ ರಿಪೋರ್ಟರ್ ಕರ್ನಾಟಕ ವರದಿ ಮಾಡಿ ಎಚ್ಚರಿಕೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು