9:49 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಅಜ್ಜಿಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಭಾಗಶಃ ಕುಸಿತ; ವಾಲಿಕೊಂಡ ಗೇಟ್: ಟಾಯ್ಲೆಟ್ ಇನ್ ಡೇಂಜರ್

12/06/2024, 20:07

ಯಾದವ ಕುಲಾಲ್ ಅಗ್ರಬೈಲು ಬಿ.ಸಿ. ರೋಡ್

info.reporterkarnataka@gmail.com

ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಜತೆ ಇರುವ ಗೇಟ್ ಬುಧವಾರ ಮಧ್ಯಾಹ್ನ ಮಳೆಯೊಂದಿಗೆ ಬಲವಾದ ಗಾಳಿ ಬೀಸಿದ ಸಂದರ್ಭ ಭಾಗಶಃ ಕುಸಿದಿದೆ.


ಇದರಿಂದ ಗೇಟ್ ವಾಲಿಕೊಂಡಿದ್ದು, ಅದಕ್ಕೆ ಜೋಡಿಕೊಂಡು ಇರುವ ಕಲ್ಲುಗಳೂ ಸಡಿಲಗೊಂಡಿವೆ. ಈ ಗೇಟ್ ಪಕ್ಕದಲ್ಲೇ ಶಾಲಾ ಮಕ್ಕಳ ಶೌಚಾಲಯವಿದ್ದು, ಅಲ್ಲಿಗೆ ತೆರಳುವ ಪುಟ್ಟ ಮಕ್ಕಳು ಈ ಗೇಟ್ ಸನಿಹವೇ ತೆರಳುತ್ತಿದ್ದು, ಇದು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಇದೀಗ ಮಕ್ಕಳು ಜೀವಭಯದಲ್ಲೇ ತೆರಳಬೇಕಾಗಿದ್ದು, ಶೀಘ್ರ ದುರಸ್ತಿಯಾಗದಿದ್ದರೆ, ಅಪಾಯ ಉಂಟಾಗಬಹುದು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ತುರ್ತಾಗಿ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮತ್ತೊಮ್ಮೆ ಮನವಿ ಮಾಡಲಾಗಿದೆ. ಶಾಲಾ ಆವರಣ ಗೋಡೆಯ ಬಗ್ಗೆ ಇತ್ತೀಚೆಗಷ್ಟೇ ರಿಪೋರ್ಟರ್ ಕರ್ನಾಟಕ ವರದಿ ಮಾಡಿ ಎಚ್ಚರಿಕೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು