2:02 PM Friday14 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಅಜ್ಜಿಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಭಾಗಶಃ ಕುಸಿತ; ವಾಲಿಕೊಂಡ ಗೇಟ್: ಟಾಯ್ಲೆಟ್ ಇನ್ ಡೇಂಜರ್

12/06/2024, 20:07

ಯಾದವ ಕುಲಾಲ್ ಅಗ್ರಬೈಲು ಬಿ.ಸಿ. ರೋಡ್

info.reporterkarnataka@gmail.com

ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಜತೆ ಇರುವ ಗೇಟ್ ಬುಧವಾರ ಮಧ್ಯಾಹ್ನ ಮಳೆಯೊಂದಿಗೆ ಬಲವಾದ ಗಾಳಿ ಬೀಸಿದ ಸಂದರ್ಭ ಭಾಗಶಃ ಕುಸಿದಿದೆ.


ಇದರಿಂದ ಗೇಟ್ ವಾಲಿಕೊಂಡಿದ್ದು, ಅದಕ್ಕೆ ಜೋಡಿಕೊಂಡು ಇರುವ ಕಲ್ಲುಗಳೂ ಸಡಿಲಗೊಂಡಿವೆ. ಈ ಗೇಟ್ ಪಕ್ಕದಲ್ಲೇ ಶಾಲಾ ಮಕ್ಕಳ ಶೌಚಾಲಯವಿದ್ದು, ಅಲ್ಲಿಗೆ ತೆರಳುವ ಪುಟ್ಟ ಮಕ್ಕಳು ಈ ಗೇಟ್ ಸನಿಹವೇ ತೆರಳುತ್ತಿದ್ದು, ಇದು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಇದೀಗ ಮಕ್ಕಳು ಜೀವಭಯದಲ್ಲೇ ತೆರಳಬೇಕಾಗಿದ್ದು, ಶೀಘ್ರ ದುರಸ್ತಿಯಾಗದಿದ್ದರೆ, ಅಪಾಯ ಉಂಟಾಗಬಹುದು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ತುರ್ತಾಗಿ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮತ್ತೊಮ್ಮೆ ಮನವಿ ಮಾಡಲಾಗಿದೆ. ಶಾಲಾ ಆವರಣ ಗೋಡೆಯ ಬಗ್ಗೆ ಇತ್ತೀಚೆಗಷ್ಟೇ ರಿಪೋರ್ಟರ್ ಕರ್ನಾಟಕ ವರದಿ ಮಾಡಿ ಎಚ್ಚರಿಕೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು