2:54 PM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಅಜ್ಜಿಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಭಾಗಶಃ ಕುಸಿತ; ವಾಲಿಕೊಂಡ ಗೇಟ್: ಟಾಯ್ಲೆಟ್ ಇನ್ ಡೇಂಜರ್

12/06/2024, 20:07

ಯಾದವ ಕುಲಾಲ್ ಅಗ್ರಬೈಲು ಬಿ.ಸಿ. ರೋಡ್

info.reporterkarnataka@gmail.com

ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಜತೆ ಇರುವ ಗೇಟ್ ಬುಧವಾರ ಮಧ್ಯಾಹ್ನ ಮಳೆಯೊಂದಿಗೆ ಬಲವಾದ ಗಾಳಿ ಬೀಸಿದ ಸಂದರ್ಭ ಭಾಗಶಃ ಕುಸಿದಿದೆ.


ಇದರಿಂದ ಗೇಟ್ ವಾಲಿಕೊಂಡಿದ್ದು, ಅದಕ್ಕೆ ಜೋಡಿಕೊಂಡು ಇರುವ ಕಲ್ಲುಗಳೂ ಸಡಿಲಗೊಂಡಿವೆ. ಈ ಗೇಟ್ ಪಕ್ಕದಲ್ಲೇ ಶಾಲಾ ಮಕ್ಕಳ ಶೌಚಾಲಯವಿದ್ದು, ಅಲ್ಲಿಗೆ ತೆರಳುವ ಪುಟ್ಟ ಮಕ್ಕಳು ಈ ಗೇಟ್ ಸನಿಹವೇ ತೆರಳುತ್ತಿದ್ದು, ಇದು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಇದೀಗ ಮಕ್ಕಳು ಜೀವಭಯದಲ್ಲೇ ತೆರಳಬೇಕಾಗಿದ್ದು, ಶೀಘ್ರ ದುರಸ್ತಿಯಾಗದಿದ್ದರೆ, ಅಪಾಯ ಉಂಟಾಗಬಹುದು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ತುರ್ತಾಗಿ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮತ್ತೊಮ್ಮೆ ಮನವಿ ಮಾಡಲಾಗಿದೆ. ಶಾಲಾ ಆವರಣ ಗೋಡೆಯ ಬಗ್ಗೆ ಇತ್ತೀಚೆಗಷ್ಟೇ ರಿಪೋರ್ಟರ್ ಕರ್ನಾಟಕ ವರದಿ ಮಾಡಿ ಎಚ್ಚರಿಕೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು