5:09 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅಜ್ಜಿಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಭಾಗಶಃ ಕುಸಿತ; ವಾಲಿಕೊಂಡ ಗೇಟ್: ಟಾಯ್ಲೆಟ್ ಇನ್ ಡೇಂಜರ್

12/06/2024, 20:07

ಯಾದವ ಕುಲಾಲ್ ಅಗ್ರಬೈಲು ಬಿ.ಸಿ. ರೋಡ್

info.reporterkarnataka@gmail.com

ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಜತೆ ಇರುವ ಗೇಟ್ ಬುಧವಾರ ಮಧ್ಯಾಹ್ನ ಮಳೆಯೊಂದಿಗೆ ಬಲವಾದ ಗಾಳಿ ಬೀಸಿದ ಸಂದರ್ಭ ಭಾಗಶಃ ಕುಸಿದಿದೆ.


ಇದರಿಂದ ಗೇಟ್ ವಾಲಿಕೊಂಡಿದ್ದು, ಅದಕ್ಕೆ ಜೋಡಿಕೊಂಡು ಇರುವ ಕಲ್ಲುಗಳೂ ಸಡಿಲಗೊಂಡಿವೆ. ಈ ಗೇಟ್ ಪಕ್ಕದಲ್ಲೇ ಶಾಲಾ ಮಕ್ಕಳ ಶೌಚಾಲಯವಿದ್ದು, ಅಲ್ಲಿಗೆ ತೆರಳುವ ಪುಟ್ಟ ಮಕ್ಕಳು ಈ ಗೇಟ್ ಸನಿಹವೇ ತೆರಳುತ್ತಿದ್ದು, ಇದು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಇದೀಗ ಮಕ್ಕಳು ಜೀವಭಯದಲ್ಲೇ ತೆರಳಬೇಕಾಗಿದ್ದು, ಶೀಘ್ರ ದುರಸ್ತಿಯಾಗದಿದ್ದರೆ, ಅಪಾಯ ಉಂಟಾಗಬಹುದು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ತುರ್ತಾಗಿ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮತ್ತೊಮ್ಮೆ ಮನವಿ ಮಾಡಲಾಗಿದೆ. ಶಾಲಾ ಆವರಣ ಗೋಡೆಯ ಬಗ್ಗೆ ಇತ್ತೀಚೆಗಷ್ಟೇ ರಿಪೋರ್ಟರ್ ಕರ್ನಾಟಕ ವರದಿ ಮಾಡಿ ಎಚ್ಚರಿಕೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು