12:38 AM Tuesday22 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ಅಜ್ಜಿಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಭಾಗಶಃ ಕುಸಿತ; ವಾಲಿಕೊಂಡ ಗೇಟ್: ಟಾಯ್ಲೆಟ್ ಇನ್ ಡೇಂಜರ್

12/06/2024, 20:07

ಯಾದವ ಕುಲಾಲ್ ಅಗ್ರಬೈಲು ಬಿ.ಸಿ. ರೋಡ್

info.reporterkarnataka@gmail.com

ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಜತೆ ಇರುವ ಗೇಟ್ ಬುಧವಾರ ಮಧ್ಯಾಹ್ನ ಮಳೆಯೊಂದಿಗೆ ಬಲವಾದ ಗಾಳಿ ಬೀಸಿದ ಸಂದರ್ಭ ಭಾಗಶಃ ಕುಸಿದಿದೆ.


ಇದರಿಂದ ಗೇಟ್ ವಾಲಿಕೊಂಡಿದ್ದು, ಅದಕ್ಕೆ ಜೋಡಿಕೊಂಡು ಇರುವ ಕಲ್ಲುಗಳೂ ಸಡಿಲಗೊಂಡಿವೆ. ಈ ಗೇಟ್ ಪಕ್ಕದಲ್ಲೇ ಶಾಲಾ ಮಕ್ಕಳ ಶೌಚಾಲಯವಿದ್ದು, ಅಲ್ಲಿಗೆ ತೆರಳುವ ಪುಟ್ಟ ಮಕ್ಕಳು ಈ ಗೇಟ್ ಸನಿಹವೇ ತೆರಳುತ್ತಿದ್ದು, ಇದು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಇದೀಗ ಮಕ್ಕಳು ಜೀವಭಯದಲ್ಲೇ ತೆರಳಬೇಕಾಗಿದ್ದು, ಶೀಘ್ರ ದುರಸ್ತಿಯಾಗದಿದ್ದರೆ, ಅಪಾಯ ಉಂಟಾಗಬಹುದು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ತುರ್ತಾಗಿ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮತ್ತೊಮ್ಮೆ ಮನವಿ ಮಾಡಲಾಗಿದೆ. ಶಾಲಾ ಆವರಣ ಗೋಡೆಯ ಬಗ್ಗೆ ಇತ್ತೀಚೆಗಷ್ಟೇ ರಿಪೋರ್ಟರ್ ಕರ್ನಾಟಕ ವರದಿ ಮಾಡಿ ಎಚ್ಚರಿಕೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು