2:50 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದಳೆಂದು ಪತ್ನಿಯನ್ನೇ ಚಾಕುನಿಂದ ಇರಿದು ಬರ್ಬರ ಕೊಲೆ!

21/07/2022, 20:47

ಹಾಸನ(reporterkarnataka.com):
ಪತಿಯೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿದ ಭಯಾನಕ ಘಟನೆ ಹಾಸನದಲ್ಲಿ ನಡೆದಿದೆ.

ಕೊಲೆಯಾದ ಗೃಹಿಣಿಯನ್ನು ಅಶ್ವಿನಿ(36) ಎಂದು ಗುರುತಿಸಲಾಗಿದೆ. 17 ವರ್ಷದ ಹಿಂದೆ ಜಗದೀಶ್ ಜೊತೆ ಪ್ರೀತಿಸಿ ಅಶ್ವಿನಿ(36) ಅವರನ್ನು ಮದುವೆಯಾಗಿದ್ದ.

ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಒಬ್ಬ ಪುತ್ರ ಹಾಗೂ ಇನ್ನೊಬ್ಬಳು ಪುತ್ರಿ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಜಗದೀಶ ಮತ್ತು ಅಶ್ವಿನಿ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಆರೋಪಿ ಈ ಹಿಂದೆ ಅಶ್ವಿನಿ ಮೇಲೆ ಹಲ್ಲೆ ಕೂಡ ನಡೆಸಿದ್ದನೆನ್ನಲಾಗಿದೆ. ಈ ಸಂಬಂಧ ಆಕೆ ಪೊಲೀಸರಿಗೆ ದೂರು ದಾಖಲಿಸಿದ್ದಳು. ಜಗದೀಶ ಮೆಡಿಕಲ್ ಶಾಪ್ ಒಂದನ್ನು ತೆರೆದು ನಷ್ಟ ಅನುಭವಿಸಿ ಮುಚ್ಚಿದ್ದ. ಅಶ್ವಿನಿ ಬೇರೊಂದು ಔಷಧ ಮಳಿಗೆಯಲ್ಲಿ ಕೆಲಸಕ್ಕಿದ್ದರು.

ಈ ವೇಳೆ ಬೇರೊಬ್ಬ ಮಹಿಳೆ ಜೊತೆ ಜಗದೀಶ ಸಂಪರ್ಕ ಬೆಳೆಸಿದ್ದ. ಇದನ್ನು ವಿರೋಧಿಸಿದ್ದಕ್ಕೆ ಹಲವು ಬಾರಿ ಹಲ್ಲೆ ನಡೆಸಿದ್ದ. ಮಗಳೊಂದಿಗೆ ಪ್ರತ್ಯೇಕವಾಗಿ ವಾಸವಿದ್ದು ವಿಚ್ಛೇದನ ಕೋರಿ ಕೋರ್ಟ್‌ ಮೆಟ್ಟಿಲೇರಿದ ಅಶ್ವಿನಿ ಜೀವನಾಂಶ ಕೋರಿದ್ದರು. ಜೀವನಾಂಶ ನೀಡಬೇಕಾಗುವುದೆಂಬ ಕಾರಣಕ್ಕೆ ಪತ್ನಿ ಮಗಳನ್ನು ಮನೆಗೆ ಕರೆದುಕೊಂಡು ಬಂದಿದ್ದ.

ಜೀವನಾಂಶ ಕೇಳಿದ್ದರಿಂದ ರೊಚ್ಚಿಗೆದ್ದಿದ್ದ ಜಗದೀಶ ಬುಧವಾರ ಬೆಳಿಗ್ಗೆ ಮಕ್ಕಳನ್ನು ಶಾಲೆಗೆ ಬಿಟ್ಟು ಬಂದು ಪತ್ನಿಗೂ ಮೆಡಿಕಲ್ ಶಾಪ್ ಗೆ ಬಿಟ್ಟು ಬಂದಿದ್ದ. ಮಧ್ಯಾಹ್ನ ಆಕೆಯನ್ನು ಊಟಕ್ಕೆಂದು ಮನೆಗೆ ಕರೆತಂದು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಶಾಲೆ ಬಿಟ್ಟು ಮನೆಗೆ ಬಂದ ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿಯನ್ನು ಕಂಡು ಅಕ್ಕಪಕ್ಕದವರಿಗೆ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು