9:58 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದಳೆಂದು ಪತ್ನಿಯನ್ನೇ ಚಾಕುನಿಂದ ಇರಿದು ಬರ್ಬರ ಕೊಲೆ!

21/07/2022, 20:47

ಹಾಸನ(reporterkarnataka.com):
ಪತಿಯೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿದ ಭಯಾನಕ ಘಟನೆ ಹಾಸನದಲ್ಲಿ ನಡೆದಿದೆ.

ಕೊಲೆಯಾದ ಗೃಹಿಣಿಯನ್ನು ಅಶ್ವಿನಿ(36) ಎಂದು ಗುರುತಿಸಲಾಗಿದೆ. 17 ವರ್ಷದ ಹಿಂದೆ ಜಗದೀಶ್ ಜೊತೆ ಪ್ರೀತಿಸಿ ಅಶ್ವಿನಿ(36) ಅವರನ್ನು ಮದುವೆಯಾಗಿದ್ದ.

ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಒಬ್ಬ ಪುತ್ರ ಹಾಗೂ ಇನ್ನೊಬ್ಬಳು ಪುತ್ರಿ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಜಗದೀಶ ಮತ್ತು ಅಶ್ವಿನಿ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಆರೋಪಿ ಈ ಹಿಂದೆ ಅಶ್ವಿನಿ ಮೇಲೆ ಹಲ್ಲೆ ಕೂಡ ನಡೆಸಿದ್ದನೆನ್ನಲಾಗಿದೆ. ಈ ಸಂಬಂಧ ಆಕೆ ಪೊಲೀಸರಿಗೆ ದೂರು ದಾಖಲಿಸಿದ್ದಳು. ಜಗದೀಶ ಮೆಡಿಕಲ್ ಶಾಪ್ ಒಂದನ್ನು ತೆರೆದು ನಷ್ಟ ಅನುಭವಿಸಿ ಮುಚ್ಚಿದ್ದ. ಅಶ್ವಿನಿ ಬೇರೊಂದು ಔಷಧ ಮಳಿಗೆಯಲ್ಲಿ ಕೆಲಸಕ್ಕಿದ್ದರು.

ಈ ವೇಳೆ ಬೇರೊಬ್ಬ ಮಹಿಳೆ ಜೊತೆ ಜಗದೀಶ ಸಂಪರ್ಕ ಬೆಳೆಸಿದ್ದ. ಇದನ್ನು ವಿರೋಧಿಸಿದ್ದಕ್ಕೆ ಹಲವು ಬಾರಿ ಹಲ್ಲೆ ನಡೆಸಿದ್ದ. ಮಗಳೊಂದಿಗೆ ಪ್ರತ್ಯೇಕವಾಗಿ ವಾಸವಿದ್ದು ವಿಚ್ಛೇದನ ಕೋರಿ ಕೋರ್ಟ್‌ ಮೆಟ್ಟಿಲೇರಿದ ಅಶ್ವಿನಿ ಜೀವನಾಂಶ ಕೋರಿದ್ದರು. ಜೀವನಾಂಶ ನೀಡಬೇಕಾಗುವುದೆಂಬ ಕಾರಣಕ್ಕೆ ಪತ್ನಿ ಮಗಳನ್ನು ಮನೆಗೆ ಕರೆದುಕೊಂಡು ಬಂದಿದ್ದ.

ಜೀವನಾಂಶ ಕೇಳಿದ್ದರಿಂದ ರೊಚ್ಚಿಗೆದ್ದಿದ್ದ ಜಗದೀಶ ಬುಧವಾರ ಬೆಳಿಗ್ಗೆ ಮಕ್ಕಳನ್ನು ಶಾಲೆಗೆ ಬಿಟ್ಟು ಬಂದು ಪತ್ನಿಗೂ ಮೆಡಿಕಲ್ ಶಾಪ್ ಗೆ ಬಿಟ್ಟು ಬಂದಿದ್ದ. ಮಧ್ಯಾಹ್ನ ಆಕೆಯನ್ನು ಊಟಕ್ಕೆಂದು ಮನೆಗೆ ಕರೆತಂದು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಶಾಲೆ ಬಿಟ್ಟು ಮನೆಗೆ ಬಂದ ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿಯನ್ನು ಕಂಡು ಅಕ್ಕಪಕ್ಕದವರಿಗೆ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು