2:57 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದಳೆಂದು ಪತ್ನಿಯನ್ನೇ ಚಾಕುನಿಂದ ಇರಿದು ಬರ್ಬರ ಕೊಲೆ!

21/07/2022, 20:47

ಹಾಸನ(reporterkarnataka.com):
ಪತಿಯೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿದ ಭಯಾನಕ ಘಟನೆ ಹಾಸನದಲ್ಲಿ ನಡೆದಿದೆ.

ಕೊಲೆಯಾದ ಗೃಹಿಣಿಯನ್ನು ಅಶ್ವಿನಿ(36) ಎಂದು ಗುರುತಿಸಲಾಗಿದೆ. 17 ವರ್ಷದ ಹಿಂದೆ ಜಗದೀಶ್ ಜೊತೆ ಪ್ರೀತಿಸಿ ಅಶ್ವಿನಿ(36) ಅವರನ್ನು ಮದುವೆಯಾಗಿದ್ದ.

ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಒಬ್ಬ ಪುತ್ರ ಹಾಗೂ ಇನ್ನೊಬ್ಬಳು ಪುತ್ರಿ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಜಗದೀಶ ಮತ್ತು ಅಶ್ವಿನಿ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಆರೋಪಿ ಈ ಹಿಂದೆ ಅಶ್ವಿನಿ ಮೇಲೆ ಹಲ್ಲೆ ಕೂಡ ನಡೆಸಿದ್ದನೆನ್ನಲಾಗಿದೆ. ಈ ಸಂಬಂಧ ಆಕೆ ಪೊಲೀಸರಿಗೆ ದೂರು ದಾಖಲಿಸಿದ್ದಳು. ಜಗದೀಶ ಮೆಡಿಕಲ್ ಶಾಪ್ ಒಂದನ್ನು ತೆರೆದು ನಷ್ಟ ಅನುಭವಿಸಿ ಮುಚ್ಚಿದ್ದ. ಅಶ್ವಿನಿ ಬೇರೊಂದು ಔಷಧ ಮಳಿಗೆಯಲ್ಲಿ ಕೆಲಸಕ್ಕಿದ್ದರು.

ಈ ವೇಳೆ ಬೇರೊಬ್ಬ ಮಹಿಳೆ ಜೊತೆ ಜಗದೀಶ ಸಂಪರ್ಕ ಬೆಳೆಸಿದ್ದ. ಇದನ್ನು ವಿರೋಧಿಸಿದ್ದಕ್ಕೆ ಹಲವು ಬಾರಿ ಹಲ್ಲೆ ನಡೆಸಿದ್ದ. ಮಗಳೊಂದಿಗೆ ಪ್ರತ್ಯೇಕವಾಗಿ ವಾಸವಿದ್ದು ವಿಚ್ಛೇದನ ಕೋರಿ ಕೋರ್ಟ್‌ ಮೆಟ್ಟಿಲೇರಿದ ಅಶ್ವಿನಿ ಜೀವನಾಂಶ ಕೋರಿದ್ದರು. ಜೀವನಾಂಶ ನೀಡಬೇಕಾಗುವುದೆಂಬ ಕಾರಣಕ್ಕೆ ಪತ್ನಿ ಮಗಳನ್ನು ಮನೆಗೆ ಕರೆದುಕೊಂಡು ಬಂದಿದ್ದ.

ಜೀವನಾಂಶ ಕೇಳಿದ್ದರಿಂದ ರೊಚ್ಚಿಗೆದ್ದಿದ್ದ ಜಗದೀಶ ಬುಧವಾರ ಬೆಳಿಗ್ಗೆ ಮಕ್ಕಳನ್ನು ಶಾಲೆಗೆ ಬಿಟ್ಟು ಬಂದು ಪತ್ನಿಗೂ ಮೆಡಿಕಲ್ ಶಾಪ್ ಗೆ ಬಿಟ್ಟು ಬಂದಿದ್ದ. ಮಧ್ಯಾಹ್ನ ಆಕೆಯನ್ನು ಊಟಕ್ಕೆಂದು ಮನೆಗೆ ಕರೆತಂದು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಶಾಲೆ ಬಿಟ್ಟು ಮನೆಗೆ ಬಂದ ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿಯನ್ನು ಕಂಡು ಅಕ್ಕಪಕ್ಕದವರಿಗೆ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು