6:17 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಅಖಿಲ ಭಾರತ ಕೊಂಕಣಿ ರಜತ ಸಮ್ಮೇಳನದ ಲಾಂಛನ ಬಿಡುಗಡೆ: ಆನ್ ಲೈನ್ ನೋಂದಣಿ ಆರಂಭ

06/10/2023, 21:26

ಮಂಗಳೂರು(reporterkarnataka.com): ಸಾಹಿತ್ಯ ಸಮ್ಮೇಳನಗಳು ಭಾಷೆ ಮತ್ತು ಸಾಹಿತ್ಯದ ವೈವಿಧ್ಯತೆಯನ್ನು ಸಂಭ್ರಮಿಸುವ ಹಬ್ಬ ಗಳಾಗಿದ್ದು , 1939ರಲ್ಲಿ ಕುಮಟಾದ ವಕೀಲ ಮಾಧವ ಮಂಜುನಾಥ ಶಾನುಭಾಗರ ದೂರದೃಷ್ಟಿಯ ಫಲಶೃತಿ ಅಖಿಲ ಭಾರತ ಕೊಂಕಣಿ ಪರಿಷತ್
ಈ ವರೆಗೆ ದೇಶದ ನಾನಾ ಭಾಗಗಳಲ್ಲಿ 24 ರಾಷ್ಟ್ರ ಮಟ್ಟದ ಕೊಂಕಣಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿದ್ದು, 2023 ನವೆಂಬರ್ 4 ಮತ್ತು 5ರಂದು ಎರಡು ದಿನ, ನಗರದ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ 25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.


ದೇಶದ ವಿವಿಧ ಭಾಗಗಳಿಂದ ಸುಮಾರು 800 ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ವಿನಾಯತಿ ನೀಡಲಾಗಿದೆ. ಪ್ರತಿನಿಧಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆ ಮಾಡಲಾಗಿದ್ದು ಒನ್ಲೈನ್ ಮೂ ಲಕ ನೋಂದಣಿ ಆರಂಭಿಸಲಾಗಿದೆ ಎಂದು 25 ನೇ
ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೊಂಕಣಿ ಕವಿ, ಚಿಂತಕ, ರಾಹುಲ್ ಎಡ್ವಟೈಸರ್ಸ್ ಮಾಲಕ ಟೈಟಸ್ ನೊರೊನ್ಹಾ ಮಾಹಿತಿ ನೀಡಿದರು .
25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ
ಸಮ್ಮೇಳನದ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಸಂತ ಅಲೋಶಿಯಸ್ ಕಾಲೇಜಿನ ಕೊಂಕಣಿ ಸಂಸ್ಥೆಯ ಸಂಚಾಲಕ ಖ್ಯಾತ ಕಲಾವಿದ ಪಿಂಟೊ ವಾಮಂಜೂರ್ ಸಮ್ಮೇ ಳನದ ಲಾಂಛನವನ್ನು ತಯಾರಿಸಿದ್ದಾರೆ. ಹಿರಿಯ ಪತ್ರಕರ್ತರಾದ , 1974ರಲ್ಲಿ ಕರ್ನಾಟಕದಲ್ಲಿ ಕೊಂಕಣಿ ಭಾಷಾ ಮಂಡಳದ ಸ್ಥಾಪನೆಗಾಗಿ ಶ್ರಮಿಸಿದ ವಿಮಲಾ ವಿ. ಪೈ ಜೀವನ ಸಿದ್ದಿ ಪ್ರಶಸ್ತಿ ಪುರಸ್ಕೃತ, ರಾಕ್ಣೊ ಪತ್ರಿಕೆಯ ವಿಶ್ರಾಂತ ಸಂಪಾದಕ ಫಾ | ಮಾ ರ್ಕ್ ವಾಲ್ಡರ್ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದರು. ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ ಮಾಹಿತಿ ಪುಸ್ತಕ ಬಿಡುಗಡೆ ಮಾಡಿದರು. ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ ಗೋಕುಲದಾಸ ಪ್ರಭು ನೋಂದಣಿ ಪುಸ್ತಕ ಬಿಡುಗಡೆ ಮಾಡಿದರು. ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ನೊ ) ಅಧ್ಯಕ್ಷ ಆಲ್ವಿನ್ ಡಿಸೋಜಾ,ಪಾನೀರ್ ಕ್ಯೂ ಆರ್ ಕೋಡ್
ಮೂಲಕ ಒನ್ಲೈನ್ ನೋಂದಣಿಗೆ ವಿಧ್ಯುಕ್ತ ಚಾಲನೆ ನೀಡಿದರು . ಅಖಿಲ ಭಾರತ ಕೊಂಕಣಿ ಪರಿಷತ್ ಅಧ್ಯಕ್ಷ ಅರುಣ್ ಉಭಯ್ಕರ್ ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು .
ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಪತ್ರಕರ್ತ ಎಚ್. ಎಂ . ಪೆರ್ನಾ ಲ್ ಸ್ವಾಗತಿಸಿ ಅತಿಥಿಗಳ ಪರಿಚಯ ಮಾಡಿದರು . ಸಾಹಿತ್ಯ ಅಕಾಡೆಮಿ, ಹೊಸದಿಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಕೊಂಕಣಿ ಭಾಷಾ ಮುಖ್ಯಸ್ಥ ಕವಿ ಮೆಲ್ವಿನ್ ರೊ ಡ್ರಿಗಸ್
ಕಾರ್ಯಕ್ರಮ ನಿರೂಪಿಸಿದರು . ವಿಶ್ವ ಕೊಂಕಣಿ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾ ರಿ ಗುರುದತ್ತ ಬಂಟ್ವಾಳ್ಕರ್ ವಂದಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು