3:54 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಅಕ್ಕಿ ನೀಡದೆ ಅನ್ನಭಾಗ್ಯ ಯೋಜನೆ ತಡೆಗೆ ಕೇಂದ್ರ ಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ

14/06/2023, 23:20

ಬೆಂಗಳೂರು(reporterkarnataka.com): ಕೇಂದ್ರ ಸರಕಾರ ಅಕ್ಕಿ ನೀಡದೆ ಅನ್ನಭಾಗ್ಯ ಯೋಜನೆ ಅನುಷ್ಠಾನಗೊಳ್ಳದಂತೆ ನೋಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಬೆಂಗಳೂರಿನ ಶಕ್ತಿ ಭವನದಲ್ಲಿ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಅಕ್ಕಿ ಇಟ್ಟುಕೊಂಡು ಕೊಡುವುದಿಲ್ಲ ಎನ್ನುತ್ತಿದೆ. ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಎಷ್ಟೇ ಷಡ್ಯಂತ್ರ ಮಾಡಿದರೂ ರಾಜ್ಯದ ಜನರಿಗೆ ನಾವು ಅಕ್ಕಿ ನೀಡುವುದು ಗ್ಯಾರಂಟಿ ಎಂದು ಮುಖ್ಯಮಂತ್ರಿ ಹೇಳಿದರು.
ಕೇಂದ್ರ ಸರಕಾರವನ್ನು ಬಡವರ ವಿರೋಧಿಗಳು ಎಂದು ಕರೆಯಬೇಕು. ಕೇಂದ್ರವೇನು ಉಚಿತವಾಗಿ ಅಕ್ಕಿ ನೀಡುವುದಿಲ್ಲ. ನಾವು ಹಣ ನೀಡಿ ಅಕ್ಕಿ ಪಡೆಯುವುದು.
ಆದರೆ ಈಗ ಕರ್ನಾಟಕಕ್ಕೆ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಕೇಂದ್ರ ಬಂದಿದೆ.
ನಾವು ಮತ್ತೆ ಕೇಂದ್ರಕ್ಕೆ ಮನವಿ ಮಾಡುತ್ತೇವೆ ಎಂದರು.
ಕಾಂಗ್ರೆಸ್ ಸರಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿಯ ಷಡ್ಯಂತ್ರಗಳನ್ನು ಮಾಡುತ್ತಿದ್ದಾರೆ .ರಾಜ್ಯ ಸರಕಾರ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಿದ್ದ ಹಿನ್ನೆಲೆ, ಭಾರತೀಯ ಆಹಾರ ನಿಗಮಕ್ಕೆ ಪ್ರತಿ ತಿಂಗಳಿಗೆ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿಯ ಅಗತ್ಯವಿದೆ ಎಂದು ಕೋರಿ ಜೂ.9ರಂದು ಪತ್ರ ಬರೆಯಲಾಗಿತ್ತು. ಇದಕ್ಕೆ ಜೂ.12ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್‍ಗೆ 3400 ರೂ.ದರದಲ್ಲಿ ಅಕ್ಕಿ ಪೂರೈಕೆ ಮಾಡುವುದಾಗಿ ನಮಗೆ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.
ಜೂ.13ರಂದು ಕೇಂದ್ರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯವು ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆದು 15 ಲಕ್ಷ ಮೆಟ್ರಿಕ್
ಟನ್ ಗೋಧಿ ಹಾಗೂ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಮಾರಾಟ ಯೋಜನೆಯಡಿ ಮಾರಾಟ ಮಾಡಲು ಸೂಚಿಸಿದೆ. ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿ, ಇತರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಇದು ಕೇಂದ್ರದಿಂದ ಆಗುತ್ತಿರುವ ದೊಡ್ಡ ಮೋಸ. ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸದೆ ಇರುವಂತೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ ಎಂದು ಅವರು ಆರೋಪಿಸಿದರು.
ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್‍ಗಡ, ಹರಿಯಾಣದವರಿಗೆ ಈಗಾಗಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿದ್ದಾರೆ. ಜೂ.15ಕ್ಕೆ ಸಚಿವ ಕೆ.ಎಚ್.ಮುನಿಯಪ್ಪ ತೆಲಂಗಾಣ ಮುಖ್ಯಮಂತ್ರಿಯನ್ನು ಭೇಟಿಯಾಗಲಿದ್ದಾರೆ. ಅಂತೆಯೆ ಛತ್ತೀಸ್‍ಗಢದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಪಡೆಯುತ್ತೇವೆ. ಒಟ್ಟಿನಲ್ಲಿ ಜನರಿಗೆ ಅನ್ನಭಾಗ್ಯ ದೊರೆಯುವಂತೆ ಮಾಡುವುದು ನಮ್ಮ ಗುರಿ ಎಂದು ಸಿದ್ದರಾಮಯ್ಯ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು