12:00 PM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಅಕ್ರಮ ಭೂಕಬಳಿಕೆ ತೆರವುಗೊಳಿಸದ ಕಂದಾಯ ಇಲಾಖೆ: ಬಾಳೂರು ಗ್ರಾಮಸ್ಥರಿಂದ ಅನಿರ್ಧಿಷ್ಟ ಪ್ರತಿಭಟನೆ

22/09/2023, 20:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಾಳೂರು ಗ್ರಾ.ಪಂ.ವ್ಯಾಪ್ತಿಯ ದರ್ಬಾರ್ ಪೇಟೆಯಲ್ಲಿ ಅಂಗನವಾಡಿ ಕಟ್ಟಡ ಕಟ್ಟಲು 22 ಗುಂಟೆ ಜಾಗ ಮಂಜೂರಾಗಿದ್ದರೂ ಖಾಸಗಿ ವ್ಯಕ್ತಿಯೋರ್ವರು ಈ ಜಾಗವನ್ನು ಆಕ್ರಮಿಸಿರುವುದರಿಂದ ಅಂಗನವಾಡಿ ಕಟ್ಟಡ ಕಟ್ಟಲು ಬೇಲಿ ಹಾಕಿರುವ ಹಿನ್ನಲೆಯಲ್ಲಿ ಸಾಧ್ಯವಾಗುತ್ತಿಲ್ಲ. ಕಂದಾಯ ಅಧಿಕಾರಿಗಳು ಈ ಅಕ್ರಮ ಜಾಗವನ್ನು ತೆರವುಗೊಳಿಸಿಲ್ಲ ಎಂದು ವಿರೋಧಿಸಿ ಬಾಳೂರಿನಲ್ಲಿ ಗ್ರಾಮಸ್ಥರು ಅನಿರ್ದಿಷ್ಟ ಅವಧಿ ಪ್ರತಿಭಟನೆ ನಡೆಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಬಾಳೂರು ಗ್ರಾ.ಪಂ.ಅಧ್ಯಕ್ಷ ಬಿ.ಬಿ.ಮಂಜುನಾಥ್ ಮಾತನಾಡಿ ‘ಅಂಗನವಾಡಿ ಕಟ್ಟಡ ಕಟ್ಟಲು ಹಣ ಮಂಜೂರಾಗಿದೆ.ಆದರೆ ಈ ಜಾಗವನ್ನು ಖಾಸಗಿ ವ್ಯಕ್ತಿಯೋರ್ವರು ಒತ್ತುವರಿ ಮಾಡಿದ್ದು ಅದನ್ನು ಬಿಡಿಸಿ ಕೊಡಲು ತಾಲ್ಲೂಕು ಆಡಳಿತ ಮೀನಮೇಷ ಎಣಿಸುತ್ತಿದೆ. ಜಾಗ ಸಿಗುವವರೆಗೂ ನಿರಂತರ ಪ್ರತಿಭಟನೆ ಮಾಡುತ್ತೇವೆ. ಗ್ರಾಮಸ್ಥರೊಂದಿಗೆ ಗ್ರಾಮ ಪಂಚಾಯಿತಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಕಂದಾಯ ಅಧಿಕಾರಿಗಳು ಶೀಘ್ರವೇ ಜಾಗ ತೆರವುಗೊಳಿಸಿ ಅಂಗನವಾಡಿ ಕಟ್ಟಡ ಕಟ್ಟಲು ಸ್ಪಂದಿಸಬೇಕು. ಇಲ್ಲವಾದರೆ ಬೇಡಿಕೆ ಈಡೇರುವವರೆಗೂ ನಿರಂತರ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರತಿಭಟನೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಗೀತಾ, ಸದಸ್ಯರಾದ ಮನೋಜ್ , ಜಯಶ್ರೀ ಪ್ರಕಾಶ್ ಗ್ರಾಮಸ್ಥರಾದ ರಘುಪತಿ, ಜಗದೀಶ್, ಪ್ರಭಾಕರ್, ಸಂದೀಪ್, ಮದನ್, ರಮೇಶ್ ,ಅವಿನಾಶ್, ಕೇಶವ, ವೆಂಕಟೇಶ್ , ಪ್ರಮೀಳಾ, ಜ್ಯೋತಿ,ನಳಿನಿ ಹಾಗೂ ಊರಿನ ಎಲ್ಲ ಪ್ರಮುಖರು,ಮಹಿಳಾ ಸಂಘದ ಎಲ್ಲಾ ಸದಸ್ಯರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು