7:26 AM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಅಕ್ರಮ ಕಸಾಯಿಖಾನೆಯ ಮೇಲೆ ಕ್ರಮ: ಪೊಲೀಸ್ ಇಲಾಖೆಗೆ ಶಾಸಕ ವೇದವ್ಯಾಸ ಕಾಮತ್ ಸೂಚನೆ

04/04/2022, 16:09

ಮಂಗಳೂರು(reporterkarnataka.com); ಮಂಗಳೂರು ನಗರದಲ್ಲಿ ಕಾರ್ಯಚರಿಸುತ್ತಿರುವ‌ ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. 

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಅಕ್ರಮವಾಗಿ ಗೋಸಾಗಾಟ, ಗೋಹತ್ಯೆಗಳು ನಡೆಯುತಿದ್ದು, ಇದರ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ಸೂಚನೆ ನೀಡಿದ್ದಾರೆ. ಕೇರಳ – ಕರ್ನಾಟಕ ಗಡಿಭಾಗದಲ್ಲಿ ಅಕ್ರಮ ಕಸಾಯಿಖಾನೆ ನಿರ್ಮಾಣವಾಗಿದ್ದು ಇಲ್ಲಿಂದ ಕದ್ದೊಯ್ಯುವ ಗೋವುಗಳನ್ನು ವಧಿಸಿ ಮುಡಿಪು ಮೂಲಕವಾಗಿ ನಗರಕ್ಕೆ ಗೋಮಾಂಸ ಸಾಗಾಟ ನಡೆಯುತ್ತಿದೆ. ನಗರದಲ್ಲಿ ಕಾರ್ಯಾಚರಿಸುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಜರಗಿಸಲು ಪೊಲೀಸ್ ಇಲಾಖೆಗೆ ಶಾಸಕ ಕಾಮತ್ ಸೂಚನೆ ನೀಡಿದ್ದಾರೆ.

ಶಾಂತಿಯುತವಾಗಿರುವ ಕರಾವಳಿಯಲ್ಲಿ ಗೋಕಳ್ಳತನ, ಗೋಹತ್ಯೆಯ ಕೋಮು ಗಲಭೆ ಎಬ್ಬಿಸಲು ಕೆಲವೊಂದು ಶಕ್ತಿಗಳು ಪ್ರಯತ್ನಿಸುತ್ತಿವೆ. ಅವೆಲ್ಲವನ್ನೂ ಮಟ್ಟ ಹಾಕಲು ಸರಕಾರ ಮತ್ತು ಪೊಲೀಸ್ ಸಮರ್ಥವಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು