10:34 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಅಕ್ರಮ ಕಿಡ್ನಿ ಮಾರಾಟ ಜಾಲ ಬಯಲು: ದೆಹಲಿ ಪೋಲೀಸರಿಂದ ವೈದ್ಯ ಸೇರಿದಂತೆ 10 ಮಂದಿ ಬಂಧನ

02/06/2022, 15:06

ಹೊಸದಿಲ್ಲಿ(reporterkarnataka.com): ಅಕ್ರಮ ಮಾರಾಟದ ಸಾಲಿಗೆ ಈಗ ಮಾನವ ಅಂಗಾಂಗಳು ಕೂಡ ಸೇರಿವೆ.

ಅಕ್ರಮ ಕಿಡ್ನಿ ಮಾರಾಟ ದಂಧೆಯನ್ನು ದೆಹಲಿ ಪೋಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. 

ಬಂಧಿತರಲ್ಲಿ ಒಬ್ಬ ಸ್ವತಃ ವೈದ್ಯನಾಗಿದ್ದು ಉಳಿದವರು ವೈದ್ಯಕೀಯ ತಂತ್ರಜ್ಞರು ಮತ್ತು ಸಹಾಯಕರಾಗಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯ ಹೌಜ್‌ ಖಾಸ್‌ ಪ್ರದೇಶದಲ್ಲಿ ಅಕ್ರಮ ಕಿಡ್ನಿ ಕಸಿ ದಂಧೆಯ ಕುರಿತು ಪ್ರಕರಣ ದಾಖಲಾಗಿತ್ತು. ಇದರ ತನಿಖೆಯ ವೇಳೆ 10 ಜನರ ಜಾಲವನ್ನು ಭೇದಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ. ಈ ಗುಂಪಿನ ಸದಸ್ಯರು ಬಡವರನ್ನು ಗುರುತಿಸಿ ಅವರಿಗೆ ಹಣದ ಆಸೆ ತೋರಿಸಿ ಕಿಡ್ನಿ ಮಾರಲು ಪುಸಲಾಯಿಸುತ್ತಿದ್ದರು. ಅವರಿಂದ ಕಿಡ್ನಿ ಪಡೆದು ಅಗತ್ಯವಿರುವ ಶ್ರೀಮಂತರಿಗೆ ಅದನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಪ್ರಸ್ತುತ 10 ಆರೋಪಿಗಳನ್ನು ಬಂಧಿಸಲಾಗಿದ್ದು ಹೆಚ್ಚಿನ ತನಿಖೆ ಜಾರಿಯಲ್ಲಿದೆ ಎಂದು ಮೂಲಗಳು ವರದಿ ಮಾಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು