5:19 AM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಅಕ್ರಮ ಕಿಡ್ನಿ ಮಾರಾಟ ಜಾಲ ಬಯಲು: ದೆಹಲಿ ಪೋಲೀಸರಿಂದ ವೈದ್ಯ ಸೇರಿದಂತೆ 10 ಮಂದಿ ಬಂಧನ

02/06/2022, 15:06

ಹೊಸದಿಲ್ಲಿ(reporterkarnataka.com): ಅಕ್ರಮ ಮಾರಾಟದ ಸಾಲಿಗೆ ಈಗ ಮಾನವ ಅಂಗಾಂಗಳು ಕೂಡ ಸೇರಿವೆ.

ಅಕ್ರಮ ಕಿಡ್ನಿ ಮಾರಾಟ ದಂಧೆಯನ್ನು ದೆಹಲಿ ಪೋಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. 

ಬಂಧಿತರಲ್ಲಿ ಒಬ್ಬ ಸ್ವತಃ ವೈದ್ಯನಾಗಿದ್ದು ಉಳಿದವರು ವೈದ್ಯಕೀಯ ತಂತ್ರಜ್ಞರು ಮತ್ತು ಸಹಾಯಕರಾಗಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯ ಹೌಜ್‌ ಖಾಸ್‌ ಪ್ರದೇಶದಲ್ಲಿ ಅಕ್ರಮ ಕಿಡ್ನಿ ಕಸಿ ದಂಧೆಯ ಕುರಿತು ಪ್ರಕರಣ ದಾಖಲಾಗಿತ್ತು. ಇದರ ತನಿಖೆಯ ವೇಳೆ 10 ಜನರ ಜಾಲವನ್ನು ಭೇದಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ. ಈ ಗುಂಪಿನ ಸದಸ್ಯರು ಬಡವರನ್ನು ಗುರುತಿಸಿ ಅವರಿಗೆ ಹಣದ ಆಸೆ ತೋರಿಸಿ ಕಿಡ್ನಿ ಮಾರಲು ಪುಸಲಾಯಿಸುತ್ತಿದ್ದರು. ಅವರಿಂದ ಕಿಡ್ನಿ ಪಡೆದು ಅಗತ್ಯವಿರುವ ಶ್ರೀಮಂತರಿಗೆ ಅದನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಪ್ರಸ್ತುತ 10 ಆರೋಪಿಗಳನ್ನು ಬಂಧಿಸಲಾಗಿದ್ದು ಹೆಚ್ಚಿನ ತನಿಖೆ ಜಾರಿಯಲ್ಲಿದೆ ಎಂದು ಮೂಲಗಳು ವರದಿ ಮಾಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು