11:30 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಅಕ್ರಮ ಕಿಡ್ನಿ ಮಾರಾಟ ಜಾಲ ಬಯಲು: ದೆಹಲಿ ಪೋಲೀಸರಿಂದ ವೈದ್ಯ ಸೇರಿದಂತೆ 10 ಮಂದಿ ಬಂಧನ

02/06/2022, 15:06

ಹೊಸದಿಲ್ಲಿ(reporterkarnataka.com): ಅಕ್ರಮ ಮಾರಾಟದ ಸಾಲಿಗೆ ಈಗ ಮಾನವ ಅಂಗಾಂಗಳು ಕೂಡ ಸೇರಿವೆ.

ಅಕ್ರಮ ಕಿಡ್ನಿ ಮಾರಾಟ ದಂಧೆಯನ್ನು ದೆಹಲಿ ಪೋಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. 

ಬಂಧಿತರಲ್ಲಿ ಒಬ್ಬ ಸ್ವತಃ ವೈದ್ಯನಾಗಿದ್ದು ಉಳಿದವರು ವೈದ್ಯಕೀಯ ತಂತ್ರಜ್ಞರು ಮತ್ತು ಸಹಾಯಕರಾಗಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯ ಹೌಜ್‌ ಖಾಸ್‌ ಪ್ರದೇಶದಲ್ಲಿ ಅಕ್ರಮ ಕಿಡ್ನಿ ಕಸಿ ದಂಧೆಯ ಕುರಿತು ಪ್ರಕರಣ ದಾಖಲಾಗಿತ್ತು. ಇದರ ತನಿಖೆಯ ವೇಳೆ 10 ಜನರ ಜಾಲವನ್ನು ಭೇದಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ. ಈ ಗುಂಪಿನ ಸದಸ್ಯರು ಬಡವರನ್ನು ಗುರುತಿಸಿ ಅವರಿಗೆ ಹಣದ ಆಸೆ ತೋರಿಸಿ ಕಿಡ್ನಿ ಮಾರಲು ಪುಸಲಾಯಿಸುತ್ತಿದ್ದರು. ಅವರಿಂದ ಕಿಡ್ನಿ ಪಡೆದು ಅಗತ್ಯವಿರುವ ಶ್ರೀಮಂತರಿಗೆ ಅದನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಪ್ರಸ್ತುತ 10 ಆರೋಪಿಗಳನ್ನು ಬಂಧಿಸಲಾಗಿದ್ದು ಹೆಚ್ಚಿನ ತನಿಖೆ ಜಾರಿಯಲ್ಲಿದೆ ಎಂದು ಮೂಲಗಳು ವರದಿ ಮಾಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು