4:14 AM Thursday16 - July 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ

ಇತ್ತೀಚಿನ ಸುದ್ದಿ

ಅಕ್ರಮ ಕಿಡ್ನಿ ಮಾರಾಟ ಜಾಲ ಬಯಲು: ದೆಹಲಿ ಪೋಲೀಸರಿಂದ ವೈದ್ಯ ಸೇರಿದಂತೆ 10 ಮಂದಿ ಬಂಧನ

02/06/2022, 15:06

ಹೊಸದಿಲ್ಲಿ(reporterkarnataka.com): ಅಕ್ರಮ ಮಾರಾಟದ ಸಾಲಿಗೆ ಈಗ ಮಾನವ ಅಂಗಾಂಗಳು ಕೂಡ ಸೇರಿವೆ.

ಅಕ್ರಮ ಕಿಡ್ನಿ ಮಾರಾಟ ದಂಧೆಯನ್ನು ದೆಹಲಿ ಪೋಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. 

ಬಂಧಿತರಲ್ಲಿ ಒಬ್ಬ ಸ್ವತಃ ವೈದ್ಯನಾಗಿದ್ದು ಉಳಿದವರು ವೈದ್ಯಕೀಯ ತಂತ್ರಜ್ಞರು ಮತ್ತು ಸಹಾಯಕರಾಗಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯ ಹೌಜ್‌ ಖಾಸ್‌ ಪ್ರದೇಶದಲ್ಲಿ ಅಕ್ರಮ ಕಿಡ್ನಿ ಕಸಿ ದಂಧೆಯ ಕುರಿತು ಪ್ರಕರಣ ದಾಖಲಾಗಿತ್ತು. ಇದರ ತನಿಖೆಯ ವೇಳೆ 10 ಜನರ ಜಾಲವನ್ನು ಭೇದಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ. ಈ ಗುಂಪಿನ ಸದಸ್ಯರು ಬಡವರನ್ನು ಗುರುತಿಸಿ ಅವರಿಗೆ ಹಣದ ಆಸೆ ತೋರಿಸಿ ಕಿಡ್ನಿ ಮಾರಲು ಪುಸಲಾಯಿಸುತ್ತಿದ್ದರು. ಅವರಿಂದ ಕಿಡ್ನಿ ಪಡೆದು ಅಗತ್ಯವಿರುವ ಶ್ರೀಮಂತರಿಗೆ ಅದನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಪ್ರಸ್ತುತ 10 ಆರೋಪಿಗಳನ್ನು ಬಂಧಿಸಲಾಗಿದ್ದು ಹೆಚ್ಚಿನ ತನಿಖೆ ಜಾರಿಯಲ್ಲಿದೆ ಎಂದು ಮೂಲಗಳು ವರದಿ ಮಾಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು