12:06 AM Wednesday2 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಕ್ರಮ ಮರಳುಗಾರಿಕೆ ಅಡ್ಡೆ: 2 ಪ್ರತ್ಯೇಕ ಸ್ಥಳಗಳಿಗೆ ಪೊಲೀಸ್ ದಾಳಿ; 12 ಲೋಡ್ ಮರಳು, ಪಿಕ್ ಅಪ್ ವಾಹನ ವಶ

24/08/2023, 14:40

ಮಂಗಳೂರು(reporterkarnataka.com): ಅಕ್ರಮ ಮರುಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 12 ಲೋಡ್ ಮರಳು ಹಾಗೂ ಪಿಕ್ ಅಪ್ ವಾಹನ ವಶಪಡಿಸಿಕೊಂಡಿದ್ದಾರೆ.


ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಕಲ್ಲಾಪು ಮತ್ತು ಉಳ್ಳಾಲ ಗ್ರಾಮದ ಕೋಟೆಪುರ ಎಂಬಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮತ್ತು ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಆ. 24ರಂದು ಬೆಳಗ್ಗಿನ ಜಾವ 4-10 ಗಂಟೆಗೆ ಉಳ್ಳಾಲ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪೆರ್ಮನ್ನೂರು ಗ್ರಾಮದ ಕಲ್ಲಾಪು ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟದ ಅಡ್ಡೆಗೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಎಲ್-29-482 ನೇ ಪಿಕ್ ಅಪ್ ವಾಹನ ಹಾಗೂ ಉಳ್ಳಾಲ ಗ್ರಾಮದ ಕೋಟೆಪುರ ಎಂಬಲ್ಲಿ ನೇತ್ರಾವತಿ ದಡದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ ಸುಮಾರು 12 ಲೋಡ್ ಸಾಮಾನ್ಯ ಮರಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ವರದಿ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು