5:06 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಅಕ್ಷರಸ್ಥರನ್ನು ಹೆಚ್ಚು ಮಾಡುವ ಮುಖಾಂತರ ದೇಶದ ಅಭಿವೃದ್ಧಿ ಜತೆ ವಿದ್ಯಾರ್ಥಿಗಳು ಕೈಜೋಡಿಸಲಿ: ಡಾ. ವೆಂಕಟೇಶ್

21/09/2021, 12:21

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com

ದೇಶದಲ್ಲಿ ಅನಕ್ಷರಸ್ಥರ ಸಂಖ್ಯೆ ಹೆಚ್ಚಾಗಿದ್ದು ಅಕ್ಷರಸ್ಥರ ಸಂಖ್ಯೆ ಯನ್ನು ಹೆಚ್ಚು ಮಾಡುವ ಮುಖಾಂತರ ಅನಕ್ಷರಸ್ಥರ ಮುಕ್ತ ಭಾರತ ಮಾಡಲು ಇಂದಿನ ವಿದ್ಯಾರ್ಥಿಗಳು ಮುಂದಾಗಬೇಕೆಂದು ರಾಜ್ಯ ಸಂಪನ್ಮೂಲ ಕೇಂದ್ರದ ನಿರ್ದೇಶಕ ಡಾ. ವೆಂಕಟೇಶ್ ಕರೆ ನೀಡಿದರು

ನಾಗಮಂಗಲ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅನಕ್ಷರರ ಪ್ರಮಾಣ ಹೆಚ್ಚಿದ್ದು ಅದನ್ನು ಕಡಿಮೆ ಮಾಡಿ ದೇಶದ ಅಭಿವೃದ್ಧಿಗೆ ಮುಂದಾಗಬೇಕೆಂದು ಕರೆ ನೀಡಿದರು.

ಪ್ರಪಂಚದಲ್ಲಿ ಅನಕ್ಷರರ ಉಳಿಕೆ ಭಾರತದಲ್ಲಿ ಮಾತ್ರ ಎಂದು ಬೆರಳುಮಾಡಿ ತೋರುವ ಸ್ಥಿತಿ ದೂರ ಮಾಡುವ ಮುಖಾಂತರ ನೀವುಗಳು ನಿಮ್ಮ ನಿಮ್ಮ ಬಳಿ ಇರುವ ಅನಕ್ಷರಸ್ಥರ ಬಗ್ಗೆ ತಿಳುವಳಿಕೆ ನೀಡುವ ಮುಖಾಂತರ ಅಕ್ಷರಸ್ಥರನ್ನಾಗಿ ಮಾಡುವಂತೆ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ರೂಕ್ಸಾನ ಕೌಸರ್ ತಿಳಿಸಿದರು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಾಮು, ಬ್ಯಾಂಕ್  ಆಫ್ ಬರೋಡೊ
ಸಂಯೋಜಕರಾದ ಸಾರಥಿ ನಾಗರಾಜು, ದೈಹಿಕ ಶಿಕ್ಷಣ ಅಧಿಕಾರಿ ಶಿವಣ್ಣಗೌಡರು ಉಪಸ್ಥಿತರಿದ್ದು,

ಕಾರ್ಯಕ್ರಮ ಸಹಾಯಕರಾದ ದಿವ್ಯ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲರಾದ ನಾಗರಾಜು ಅಧ್ಯಕ್ಷತೆ ವಹಿಸಿದ್ದರು. ಸಾಕ್ಷರತಾ ಸಂಯೋಜಕರಾದ ಕೃಷ್ಣ ವಂದಿಸಿದರು. ಶ್ರೀನಿವಾಸ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು