5:45 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಆಲಂಕಾರು: ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ವಾರ್ಷಿಕ ವಿಶೇಷ ಶಿಬಿರ 

23/01/2022, 19:24

ಉಪ್ಪಿಂಗಡಿ(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯಡಿ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉಪ್ಪಿನಂಗಡಿಯ ಆಲಂಕಾರಿನ ದ. ಕ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.

ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ, ಹಾಗೂ ಶಿಬಿರ ನಿರ್ದೇಶಕಿ ಡಾ. ನಾಗರತ್ನ ಕೆ. ಎ. ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಮೃತ ಸಮುದಾಯ ಯೋಜನೆಯ ಸಲುವಾಗಿ ಈ ವಾರ್ಷಿಕ ವಿಶೇಷ ಶಿಬಿರ ವನ್ನು ಆಲಂಕಾರು ಗ್ರಾಮದ 102 ವರ್ಷಗಳ ಇತಿಹಾಸವುಳ್ಳ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿರುವುದು ಸಮರ್ಪಕ ಎಂದರು .

ಶಿಬಿರವು ವಿದ್ಯಾರ್ಥಿಗಳಲ್ಲಿ ಸಂಘಟಿತ ಜವಾಬ್ದಾರಿಯ ಪ್ರಜ್ಞೆಯನ್ನು ಬೆಳೆಸುವಲ್ಲಿ ಸಹಕಾರಿ ಹಾಗೂ ವ್ಯಕ್ತಿತ್ವದ ವಿಕಸನದ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ  ಪುತ್ತೂರಿನ ಶಿಕ್ಷಣಧಿಕಾರಿ ಲೋಕೇಶ್ ಸಿ.ಮಾತನಾಡಿ, ಈ ಶಿಬಿರದಿಂದ ಗ್ರಾಮಕ್ಕೆ ಉಪಯುಕ್ತವಾಗುವ ಕೆಲಸ ಮಾಡಿ, ಮಂಗಳೂರು ವಿವಿಗೆ ಒಳ್ಳೆಯ ಹೆಸರು ತನ್ನಿ, ನಾನು ಮೈಸೂರು ಯೂನಿವರ್ಸಿಟಿ ರಾ.ಸೇ.ಯೋ ಸ್ವಯಂ ಸೇವಕನಾಗಿದ್ದೆ. ಅವಾಗ ಕಂಪೌಂಡ್ ಕಟ್ಟು ವ ತರಬೇತಿ ನೀಡುತ್ತಿದ್ದರು. ಕಂಪೌಂಡ್ ಕಟ್ಟಿದ್ದೇನೆ ಎಂಬ ಖುಷಿ , ತೃಪ್ತಿ ನನಗಿದೆ ಎಂದು ಅವರು ಹೇಳಿದರು.


ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಸಂಚಾಲಕ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ  ಮೋಹನ್ ರಾಮ್ ಸುಳ್ಳಿ ವಹಿಸಿದ್ದರು.ಕುಕ್ಕೆ ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕ ಡಾ. ಪ್ರಸಾದ ಎನ್.,



ಆಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷ ಸದಾನಂದ ಆಚಾರ್ಯ , ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳು ಡಾ. ಆಕಾಶ್, ಶಿಬಿರ ಸಹ ಸಂಯೋಜಕ  ರವಿ ಪೂಜಾರಿ, ಆಲಂಕಾರು ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ  ನಿಂಗರಾಜು ಕೆ.ಎ,. ಶಿಬಿರದ ಸಹ ಸಂಯೋಜಕಿ  ನಮಿತಾ ಎಂ. ಎ., ಶಿಬಿರದ ನಾಯಕರುಗಳಾದ  ಇಂದ್ರಕುಮಾರ್, ಹರಿ ಚಂದನ್, ಜಯಶ್ರೀ, ಧನ್ಯ ಮತ್ತಿತರರು ಉಪಸ್ಥಿತರಿದ್ದರು.


ಶಿಬಿರದ ಸಂಯೋಜಕಿ  ಆರತಿ ಕೆ.  ಸ್ವಾಗತಿಸಿದರು. ಡಾ. ಕೃಷ್ಣ ಡಿ ಲಮಾಣಿ ವಂದಿಸಿದರು. ವಿದ್ಯಾರ್ಥಿನಿ ಚುಂಚನ ಪಿ, ವಿಘ್ನೇಶ್ ಎಸ್ . ಕಾರ್ಯಕ್ರಮ ನಿರೂಪಿಸಿದರು. ವೈಷ್ಣವಿ ಹಾಗೂ ಬಳಗ ಶಿಬಿರ ಗೀತೆಯನ್ನು ಹಾಡಿದರು

ಇತ್ತೀಚಿನ ಸುದ್ದಿ

ಜಾಹೀರಾತು