6:52 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಆಲಂಕಾರು: ಹೆಡ್‌ಲೈಟ್ ಇಲ್ಲದೇ ಕೆಎಸ್ಸಾರ್ಟಿಸಿ  ಬಸ್ ಓಡಿಸಿದ ಚಾಲಕ!: ಪ್ರಯಾಣಿಕರ ಪ್ರಾಣ ಜತೆ ಚೆಲ್ಲಾಟ!!

12/04/2022, 22:43

ಕಡಬ(reporterkarnataka.com): ಬಸ್ ಹೆಡ್‌ಲೈಟ್ ಇಲ್ಲದೇ 10 ಕಿ.ಮೀ. ಗೂ ಅಧಿಕ ದೂರದವರೆಗೆ ಬಸ್ ಚಲಾಯಿಸಿದ ಕೆಎಸ್‌ಆರ್‌ಟಿಸಿ ಚಾಲಕ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ ಘಟನೆ ಸೋಮವಾರ ರಾತ್ರಿ ಆಲಂಕಾರಿನಲ್ಲಿ ನಡೆದಿದೆ.

ಉಪ್ಪಿನಂಗಡಿಯಿಂದ ರಾತ್ರಿ 7.15ಕ್ಕೆ ಕಡಬ ಕಡೆಗೆ ಹೊರಟ ಕಾರವಾರ – ಕುಕ್ಕೆ ಸುಬ್ರಹ್ಮಣ್ಯ ಎಕ್ಸ್‌ಪ್ರೆಸ್ ಬಸ್‌ನಲ್ಲಿ ಮುಂಭಾಗದ ನಾಲ್ಕು ಲೈಟ್‌ಗಳೂ ಕೂಡಾ ಕೆಟ್ಟುಹೋಗಿತ್ತು.

ಆದರೂ ಬಸ್ಸಿನ ಚಾಲಕ ತನ್ನ ಬೇಜವಾಬ್ದಾರಿಯಿಂದಾಗಿ ಉಪ್ಪಿನಂಗಡಿಯಿಂದ ಹೊರಟಿದ್ದಾನೆ. ಕತ್ತಲೆಯಲ್ಲೇ ಬಸ್ಸನ್ನು ಚಲಾಯಿಸಿದ ಚಾಲಕ ಆಲಂಕಾರುವರೆಗೆ ಬಸ್ಸು ಚಲಾಯಿಸಿದ್ದಾನೆ. ಬಸ್ಸಿನಲ್ಲಿ ಸುಮಾರು ಐವತ್ತರಷ್ಟು ಪ್ರಯಾಣಿಕರಿದ್ದರು. ಈ ನಡುವೆ ಬಸ್ಸಿನ ಒಳಗಿನಿಂದ ಪ್ರಯಾಣಿಕರೋರ್ವರು ವೀಡಿಯೋ ಮಾಡುವುದನ್ನು ಗಮನಿಸಿದ ಚಾಲಕ ಹಾಗೂ ನಿರ್ವಾಹಕ ಆಲಂಕಾರು ತಲುಪುತ್ತಿದ್ದಂತೆ ಒಂದು ಲೈಟನ್ನು ಸರಿಪಡಿಸಿ ಬಸ್ಸನ್ನು ಚಲಾಯಿಸಿದ್ದಾರೆ.

ಬಸ್ಸಿನಲ್ಲಿ ಪ್ರಯಾಣಿಕರನ್ನು ಕಳುಹಿಸುವ ಬದಲು ಚಾಲಕ ಮಾಡಿರುವ ದುಸ್ಸಾಹಸಕ್ಕೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಿಟ್ಟಾಗಿದ್ದರು.

ಒಟ್ಟಿನಲ್ಲಿ ಸಾರಿಗೆ ಅಧಿಕಾರಿಗಳ ಬೇಜಾವಾಬ್ದಾರಿತನದಿಂದ ಪ್ರಯಾಣಿಕರು ಜೀವಭಯದಿಂದ ಸಂಚರಿಸುವಂತಾಗಿದೆ. ಇವರ ನಿರ್ಲಕ್ಷ್ಯತನದ ಬಗ್ಗೆ ಗಮನ ಹರಿಸಿ ಸರ್ಕಾರ ಎಚ್ಚೆತ್ತುಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು