10:30 PM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಆಲಂಕಾರು: ಹೆಡ್‌ಲೈಟ್ ಇಲ್ಲದೇ ಕೆಎಸ್ಸಾರ್ಟಿಸಿ  ಬಸ್ ಓಡಿಸಿದ ಚಾಲಕ!: ಪ್ರಯಾಣಿಕರ ಪ್ರಾಣ ಜತೆ ಚೆಲ್ಲಾಟ!!

12/04/2022, 22:43

ಕಡಬ(reporterkarnataka.com): ಬಸ್ ಹೆಡ್‌ಲೈಟ್ ಇಲ್ಲದೇ 10 ಕಿ.ಮೀ. ಗೂ ಅಧಿಕ ದೂರದವರೆಗೆ ಬಸ್ ಚಲಾಯಿಸಿದ ಕೆಎಸ್‌ಆರ್‌ಟಿಸಿ ಚಾಲಕ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ ಘಟನೆ ಸೋಮವಾರ ರಾತ್ರಿ ಆಲಂಕಾರಿನಲ್ಲಿ ನಡೆದಿದೆ.

ಉಪ್ಪಿನಂಗಡಿಯಿಂದ ರಾತ್ರಿ 7.15ಕ್ಕೆ ಕಡಬ ಕಡೆಗೆ ಹೊರಟ ಕಾರವಾರ – ಕುಕ್ಕೆ ಸುಬ್ರಹ್ಮಣ್ಯ ಎಕ್ಸ್‌ಪ್ರೆಸ್ ಬಸ್‌ನಲ್ಲಿ ಮುಂಭಾಗದ ನಾಲ್ಕು ಲೈಟ್‌ಗಳೂ ಕೂಡಾ ಕೆಟ್ಟುಹೋಗಿತ್ತು.

ಆದರೂ ಬಸ್ಸಿನ ಚಾಲಕ ತನ್ನ ಬೇಜವಾಬ್ದಾರಿಯಿಂದಾಗಿ ಉಪ್ಪಿನಂಗಡಿಯಿಂದ ಹೊರಟಿದ್ದಾನೆ. ಕತ್ತಲೆಯಲ್ಲೇ ಬಸ್ಸನ್ನು ಚಲಾಯಿಸಿದ ಚಾಲಕ ಆಲಂಕಾರುವರೆಗೆ ಬಸ್ಸು ಚಲಾಯಿಸಿದ್ದಾನೆ. ಬಸ್ಸಿನಲ್ಲಿ ಸುಮಾರು ಐವತ್ತರಷ್ಟು ಪ್ರಯಾಣಿಕರಿದ್ದರು. ಈ ನಡುವೆ ಬಸ್ಸಿನ ಒಳಗಿನಿಂದ ಪ್ರಯಾಣಿಕರೋರ್ವರು ವೀಡಿಯೋ ಮಾಡುವುದನ್ನು ಗಮನಿಸಿದ ಚಾಲಕ ಹಾಗೂ ನಿರ್ವಾಹಕ ಆಲಂಕಾರು ತಲುಪುತ್ತಿದ್ದಂತೆ ಒಂದು ಲೈಟನ್ನು ಸರಿಪಡಿಸಿ ಬಸ್ಸನ್ನು ಚಲಾಯಿಸಿದ್ದಾರೆ.

ಬಸ್ಸಿನಲ್ಲಿ ಪ್ರಯಾಣಿಕರನ್ನು ಕಳುಹಿಸುವ ಬದಲು ಚಾಲಕ ಮಾಡಿರುವ ದುಸ್ಸಾಹಸಕ್ಕೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಿಟ್ಟಾಗಿದ್ದರು.

ಒಟ್ಟಿನಲ್ಲಿ ಸಾರಿಗೆ ಅಧಿಕಾರಿಗಳ ಬೇಜಾವಾಬ್ದಾರಿತನದಿಂದ ಪ್ರಯಾಣಿಕರು ಜೀವಭಯದಿಂದ ಸಂಚರಿಸುವಂತಾಗಿದೆ. ಇವರ ನಿರ್ಲಕ್ಷ್ಯತನದ ಬಗ್ಗೆ ಗಮನ ಹರಿಸಿ ಸರ್ಕಾರ ಎಚ್ಚೆತ್ತುಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು