7:33 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಆಲಂಕಾರು: ಹೆಡ್‌ಲೈಟ್ ಇಲ್ಲದೇ ಕೆಎಸ್ಸಾರ್ಟಿಸಿ  ಬಸ್ ಓಡಿಸಿದ ಚಾಲಕ!: ಪ್ರಯಾಣಿಕರ ಪ್ರಾಣ ಜತೆ ಚೆಲ್ಲಾಟ!!

12/04/2022, 22:43

ಕಡಬ(reporterkarnataka.com): ಬಸ್ ಹೆಡ್‌ಲೈಟ್ ಇಲ್ಲದೇ 10 ಕಿ.ಮೀ. ಗೂ ಅಧಿಕ ದೂರದವರೆಗೆ ಬಸ್ ಚಲಾಯಿಸಿದ ಕೆಎಸ್‌ಆರ್‌ಟಿಸಿ ಚಾಲಕ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ ಘಟನೆ ಸೋಮವಾರ ರಾತ್ರಿ ಆಲಂಕಾರಿನಲ್ಲಿ ನಡೆದಿದೆ.

ಉಪ್ಪಿನಂಗಡಿಯಿಂದ ರಾತ್ರಿ 7.15ಕ್ಕೆ ಕಡಬ ಕಡೆಗೆ ಹೊರಟ ಕಾರವಾರ – ಕುಕ್ಕೆ ಸುಬ್ರಹ್ಮಣ್ಯ ಎಕ್ಸ್‌ಪ್ರೆಸ್ ಬಸ್‌ನಲ್ಲಿ ಮುಂಭಾಗದ ನಾಲ್ಕು ಲೈಟ್‌ಗಳೂ ಕೂಡಾ ಕೆಟ್ಟುಹೋಗಿತ್ತು.

ಆದರೂ ಬಸ್ಸಿನ ಚಾಲಕ ತನ್ನ ಬೇಜವಾಬ್ದಾರಿಯಿಂದಾಗಿ ಉಪ್ಪಿನಂಗಡಿಯಿಂದ ಹೊರಟಿದ್ದಾನೆ. ಕತ್ತಲೆಯಲ್ಲೇ ಬಸ್ಸನ್ನು ಚಲಾಯಿಸಿದ ಚಾಲಕ ಆಲಂಕಾರುವರೆಗೆ ಬಸ್ಸು ಚಲಾಯಿಸಿದ್ದಾನೆ. ಬಸ್ಸಿನಲ್ಲಿ ಸುಮಾರು ಐವತ್ತರಷ್ಟು ಪ್ರಯಾಣಿಕರಿದ್ದರು. ಈ ನಡುವೆ ಬಸ್ಸಿನ ಒಳಗಿನಿಂದ ಪ್ರಯಾಣಿಕರೋರ್ವರು ವೀಡಿಯೋ ಮಾಡುವುದನ್ನು ಗಮನಿಸಿದ ಚಾಲಕ ಹಾಗೂ ನಿರ್ವಾಹಕ ಆಲಂಕಾರು ತಲುಪುತ್ತಿದ್ದಂತೆ ಒಂದು ಲೈಟನ್ನು ಸರಿಪಡಿಸಿ ಬಸ್ಸನ್ನು ಚಲಾಯಿಸಿದ್ದಾರೆ.

ಬಸ್ಸಿನಲ್ಲಿ ಪ್ರಯಾಣಿಕರನ್ನು ಕಳುಹಿಸುವ ಬದಲು ಚಾಲಕ ಮಾಡಿರುವ ದುಸ್ಸಾಹಸಕ್ಕೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಿಟ್ಟಾಗಿದ್ದರು.

ಒಟ್ಟಿನಲ್ಲಿ ಸಾರಿಗೆ ಅಧಿಕಾರಿಗಳ ಬೇಜಾವಾಬ್ದಾರಿತನದಿಂದ ಪ್ರಯಾಣಿಕರು ಜೀವಭಯದಿಂದ ಸಂಚರಿಸುವಂತಾಗಿದೆ. ಇವರ ನಿರ್ಲಕ್ಷ್ಯತನದ ಬಗ್ಗೆ ಗಮನ ಹರಿಸಿ ಸರ್ಕಾರ ಎಚ್ಚೆತ್ತುಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು