12:14 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಅಲಂಕಾರು: ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ, ಸನ್ಮಾನ ಸಮಾರಂಭ

23/06/2022, 12:07

ಉಪ್ಪಿನಂಗಡಿ(reporterkarnataka.com); ಅಲಂಕಾರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಜಯಶ್ರೀ ಎಸ್. ಜನಾರ್ಧನ ಗೌಡ.ಕೆ. ಹಾಗೂ ಕಮಲ ಕೆ. ಅವರು ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಶಾಲಾ ಶಿಕ್ಷಕರ ಹಾಗೂ ಎಸ್ಡಿಎಂಸಿ ಅವರು ಮತ್ತು ಪೋಷಕರ ವತಿಯಿಂದ ಅವರನ್ನು ಸನ್ಮಾನಿಸಿ,ಬೀಳ್ಕೊಡಲಾಯಿತು.

ಗೋಪಾಲಕೃಷ್ಣ ಪಡ್ಡಿಲಾಯ  (ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರು) ಮತ್ತು ಮುತ್ತಪ್ಪ ಪೂಜಾರಿ (ನಿವೃತ್ತ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಸಿಎ ಬ್ಯಾಂಕ್ ಅಲಂಕಾರು) ಶ್ರೀ ರಾಮಕೃಷ್ಣ ಮಲ್ಲಾರ (ಅಧ್ಯಕ್ಷರು ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ) ಅವರು ಭಡ್ತಿಗೊಂಡ ಶಿಕ್ಷಕರಿಗೆ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪದನಿಮಿತ್ತ SDMC ಸದಸ್ಯರು  ರವಿ ಪೂಜಾರಿ, ಪ್ರಕಾಶ್ ಬಿ.(ಅಲಂಕಾರು ಕ್ಲಸ್ಟರ್  ಸಮೂಹ ಸಂಪನ್ಮೂಲ ವ್ಯಕ್ತಿ) ಉಪಸ್ಥಿತರಿದ್ದರು.ಎಸ್ಡಿಎಂಸಿ ಅಧ್ಯಕ್ಷರ ದಯಾನಂದ ಕರ್ಕೇರ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. 

ನಿಂಗರಾಜು ಕೆ.ಪಿ., ಎಸ್ಡಿಎಂಸಿ ಸದಸ್ಯರಾದ ಅಬುಬಕರ್ ನಕ್ಕರೆ, ದಿನೇಶ್ ದೇವಾಡಿಗ ಹರೀಶ್ ಗೌಡ ನೆಕ್ಕರೆ, ವಿನುತಾ, ಸೌಮ್ಯ, ಕಮಲ,ಮೋಹಿನಿ, ವಿಜಯಲಕ್ಷ್ಮಿ , ನಸೀಮಾ, ಶಿಕ್ಷಕರಾದ ವನಜ, ವಿಶ್ವ ನಾಯ್ಕ, ಅತಿಥಿ ಶಿಕ್ಷಕರಾದ ವನಿತಾ, ಪ್ರತಿಮಾ, ರೋಶನಿ ಹಾಗೂ ಗೌರವ ಶಿಕ್ಷಕರಾದ ಜ್ಯೋತಿ,  ರಮ್ಯ, ಅಖಿಲ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿಯರಾದ ಅಶ್ವಿನಿ ಕುಮಾರಿ, ವಾಣಿಶ್ರೀ ಮುಂತಾದವರು ಭಾಗಿಯಾಗಿದ್ದರು. ಮುಖ್ಯಗುರುಗಳು ನಿಂಗರಾಜು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಪ್ರಭಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು