4:21 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಅಲಂಕಾರು: ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ, ಸನ್ಮಾನ ಸಮಾರಂಭ

23/06/2022, 12:07

ಉಪ್ಪಿನಂಗಡಿ(reporterkarnataka.com); ಅಲಂಕಾರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಜಯಶ್ರೀ ಎಸ್. ಜನಾರ್ಧನ ಗೌಡ.ಕೆ. ಹಾಗೂ ಕಮಲ ಕೆ. ಅವರು ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಶಾಲಾ ಶಿಕ್ಷಕರ ಹಾಗೂ ಎಸ್ಡಿಎಂಸಿ ಅವರು ಮತ್ತು ಪೋಷಕರ ವತಿಯಿಂದ ಅವರನ್ನು ಸನ್ಮಾನಿಸಿ,ಬೀಳ್ಕೊಡಲಾಯಿತು.

ಗೋಪಾಲಕೃಷ್ಣ ಪಡ್ಡಿಲಾಯ  (ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರು) ಮತ್ತು ಮುತ್ತಪ್ಪ ಪೂಜಾರಿ (ನಿವೃತ್ತ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಸಿಎ ಬ್ಯಾಂಕ್ ಅಲಂಕಾರು) ಶ್ರೀ ರಾಮಕೃಷ್ಣ ಮಲ್ಲಾರ (ಅಧ್ಯಕ್ಷರು ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ) ಅವರು ಭಡ್ತಿಗೊಂಡ ಶಿಕ್ಷಕರಿಗೆ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪದನಿಮಿತ್ತ SDMC ಸದಸ್ಯರು  ರವಿ ಪೂಜಾರಿ, ಪ್ರಕಾಶ್ ಬಿ.(ಅಲಂಕಾರು ಕ್ಲಸ್ಟರ್  ಸಮೂಹ ಸಂಪನ್ಮೂಲ ವ್ಯಕ್ತಿ) ಉಪಸ್ಥಿತರಿದ್ದರು.ಎಸ್ಡಿಎಂಸಿ ಅಧ್ಯಕ್ಷರ ದಯಾನಂದ ಕರ್ಕೇರ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. 

ನಿಂಗರಾಜು ಕೆ.ಪಿ., ಎಸ್ಡಿಎಂಸಿ ಸದಸ್ಯರಾದ ಅಬುಬಕರ್ ನಕ್ಕರೆ, ದಿನೇಶ್ ದೇವಾಡಿಗ ಹರೀಶ್ ಗೌಡ ನೆಕ್ಕರೆ, ವಿನುತಾ, ಸೌಮ್ಯ, ಕಮಲ,ಮೋಹಿನಿ, ವಿಜಯಲಕ್ಷ್ಮಿ , ನಸೀಮಾ, ಶಿಕ್ಷಕರಾದ ವನಜ, ವಿಶ್ವ ನಾಯ್ಕ, ಅತಿಥಿ ಶಿಕ್ಷಕರಾದ ವನಿತಾ, ಪ್ರತಿಮಾ, ರೋಶನಿ ಹಾಗೂ ಗೌರವ ಶಿಕ್ಷಕರಾದ ಜ್ಯೋತಿ,  ರಮ್ಯ, ಅಖಿಲ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿಯರಾದ ಅಶ್ವಿನಿ ಕುಮಾರಿ, ವಾಣಿಶ್ರೀ ಮುಂತಾದವರು ಭಾಗಿಯಾಗಿದ್ದರು. ಮುಖ್ಯಗುರುಗಳು ನಿಂಗರಾಜು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಪ್ರಭಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು