6:27 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಅಲಂಕಾರು: ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ, ಸನ್ಮಾನ ಸಮಾರಂಭ

23/06/2022, 12:07

ಉಪ್ಪಿನಂಗಡಿ(reporterkarnataka.com); ಅಲಂಕಾರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಜಯಶ್ರೀ ಎಸ್. ಜನಾರ್ಧನ ಗೌಡ.ಕೆ. ಹಾಗೂ ಕಮಲ ಕೆ. ಅವರು ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಶಾಲಾ ಶಿಕ್ಷಕರ ಹಾಗೂ ಎಸ್ಡಿಎಂಸಿ ಅವರು ಮತ್ತು ಪೋಷಕರ ವತಿಯಿಂದ ಅವರನ್ನು ಸನ್ಮಾನಿಸಿ,ಬೀಳ್ಕೊಡಲಾಯಿತು.

ಗೋಪಾಲಕೃಷ್ಣ ಪಡ್ಡಿಲಾಯ  (ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರು) ಮತ್ತು ಮುತ್ತಪ್ಪ ಪೂಜಾರಿ (ನಿವೃತ್ತ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಸಿಎ ಬ್ಯಾಂಕ್ ಅಲಂಕಾರು) ಶ್ರೀ ರಾಮಕೃಷ್ಣ ಮಲ್ಲಾರ (ಅಧ್ಯಕ್ಷರು ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ) ಅವರು ಭಡ್ತಿಗೊಂಡ ಶಿಕ್ಷಕರಿಗೆ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪದನಿಮಿತ್ತ SDMC ಸದಸ್ಯರು  ರವಿ ಪೂಜಾರಿ, ಪ್ರಕಾಶ್ ಬಿ.(ಅಲಂಕಾರು ಕ್ಲಸ್ಟರ್  ಸಮೂಹ ಸಂಪನ್ಮೂಲ ವ್ಯಕ್ತಿ) ಉಪಸ್ಥಿತರಿದ್ದರು.ಎಸ್ಡಿಎಂಸಿ ಅಧ್ಯಕ್ಷರ ದಯಾನಂದ ಕರ್ಕೇರ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. 

ನಿಂಗರಾಜು ಕೆ.ಪಿ., ಎಸ್ಡಿಎಂಸಿ ಸದಸ್ಯರಾದ ಅಬುಬಕರ್ ನಕ್ಕರೆ, ದಿನೇಶ್ ದೇವಾಡಿಗ ಹರೀಶ್ ಗೌಡ ನೆಕ್ಕರೆ, ವಿನುತಾ, ಸೌಮ್ಯ, ಕಮಲ,ಮೋಹಿನಿ, ವಿಜಯಲಕ್ಷ್ಮಿ , ನಸೀಮಾ, ಶಿಕ್ಷಕರಾದ ವನಜ, ವಿಶ್ವ ನಾಯ್ಕ, ಅತಿಥಿ ಶಿಕ್ಷಕರಾದ ವನಿತಾ, ಪ್ರತಿಮಾ, ರೋಶನಿ ಹಾಗೂ ಗೌರವ ಶಿಕ್ಷಕರಾದ ಜ್ಯೋತಿ,  ರಮ್ಯ, ಅಖಿಲ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿಯರಾದ ಅಶ್ವಿನಿ ಕುಮಾರಿ, ವಾಣಿಶ್ರೀ ಮುಂತಾದವರು ಭಾಗಿಯಾಗಿದ್ದರು. ಮುಖ್ಯಗುರುಗಳು ನಿಂಗರಾಜು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಪ್ರಭಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು