3:18 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅಲೆಮಾರಿ ಶಿಳ್ಳೆಕ್ಯಾತ ಸಮುದಾಯ ಗುಡಿಸಲಿಗೆ ಜಿಲ್ಲಾಧಿಕಾರಿ ಭೇಟಿ: ಪಡಿತರ ವ್ಯವಸ್ಥೆ, ಔಷಧೋಪಚಾರಕ್ಕೆ ಅಧಿಕಾರಿಗಳಿಗೆ ಸೂಚನೆ

26/05/2021, 19:21

ಮಂಗಳೂರು(reporterkarnataka news): ನಗರದ ಹೊಯಿಗೆ ಬಜಾರ್ ನ ನೇತ್ರಾವತಿ ನದಿ ತೀರದಲ್ಲಿ ಟೆಂಟ್ ಗಳಲ್ಲಿ ಬದುಕುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳನ್ನು ಬುಧವಾರ ಭೇಟಿಯಾಗಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಮುದಾಯದ ಜನರಿಗೆ ಪಡಿತರ ಹಾಗೂ ಔಷಧೋಪಚಾರ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇತ್ತೀಚೆಗೆ ತೌಕ್ತೆ ಚಂಡಮಾರುತದ ಪರಿಣಾಮದಿಂದಾಗಿ ಟೆಂಟ್ ಗಳು ಹಾರಿ ಹೋಗಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳು ಹಲವು ಸಮಸ್ಯೆಗಳನ್ನು ಅನುಭವಿಸಿತ್ತು. ಇದಲ್ಲದೆ ಕೊರೊನಾ ಲಾಕ್ಡೌನ್ ನಿಂದಾಗಿ ಒಂದೊತ್ತಿನ ಊಟಕ್ಕೂ ಪಡಿತರ ಇಲ್ಲದೆ ಪರದಾಡುವಂತಾಗಿದೆ.

 ಈ ಸಮುದಾಯಕ್ಕೆ ಆಹಾರ ಸಾಮಗ್ರಿ ಸಹಿತ ಆರ್ಥಿಕ ಪರಿಹಾರ ನೀಡಬೇಕೆಂದು ಜಿಲ್ಲಾಡಳಿತವನ್ನು ಡಿವೈಎಫ್ ಐ ಒತ್ತಾಯಿಸಲಾಗಿತ್ತು. ಈ ಬಗ್ಗೆ ಗಮನಹರಿಸಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಹೊಯಿಗೆಬಜಾರಿನ ಶಿಳ್ಳೆಕ್ಯಾತ ಅಲೆಮಾರಿ ಜನಾಂಗದವರು ವಾಸಿಸುತ್ತಿರುವ ಕ್ಯಾಂಪ್ ಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿದರು. ಶಿಳ್ಳೆಕ್ಯಾತ ಕುಟುಂಬಗಳಿಗೆ ಬೇಕಾಗಿರುವ ಪಡಿತರ ಆಹಾರ ಸಾಮಗ್ರಿಗಳನ್ನು ಒದಗಿಸಿಕೊಡಲು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು. ಅದೇ ರೀತಿ ಸೊಳ್ಳೆ ಪರದೆಗಳನ್ನು ವಿತರಿಸಲು ಹಾಗೂ ಎಲ್ಲರ ಆರೋಗ್ಯ ತಪಾಸಣೆ ನಡೆಸಲು ಸೂಚಿಸಿದರು. ವಸತಿ, ವಿದ್ಯುತ್, ದಾರಿ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಮುಂದಿನ ದಿನ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು. 


ಈ ವೇಳೆ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ , ಕರಾವಳಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಸಮಿತಿಯ ಗೌರವಾಧ್ಯಕ್ಷರು ಸಂತೋಷ್ ಬಜಾಲ್ , ಅಲೆಮಾರಿ ನಿಗಮದ ಅಧಿಕಾರಿ ಸೋಮಪ್ಪ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು