12:58 AM Thursday15 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ ಸರ್ವಜ್ಞ ಪೀಠ ಆಲಂಕಾರ

16/01/2026, 00:49

ಉಡುಪಿ(reporterkarnatata.com): ಶ್ರೀ ಶೀರೂರು ಮಠ ಪರ್ಯಾಯ ಮಹೋತ್ಸವದ ಶೋಭಾ ಯಾತ್ರೆ ಜನವರಿ 18 ಭಾನುವಾರ ಬೆಳಿಗ್ಗೆ 2 ಗಂಟೆಯಿಂದ ಆರಂಭವಾಗಲಿದ್ದು, ಕಲ್ಪನಾ ಜಂಕ್ಷನ್ ಮೂಲಕ ರಥ ಬೀದಿಗೆ ಸಾಗಲಿದೆ. ಸುಮಾರು 2 ತಾಸು ಮೆರವಣಿಗೆ ಸಂಚರಿಸಲಿದೆ. ಪರ್ಯಾಯ ಮೆರವಣಿಗೆಯಲ್ಲಿ ಸುಮಾರು 2ರಿಂದ 3 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ.
ಪರ್ಯಾಯ ಮೆರವಣಿಗೆ ಅತ್ಯಂತ ವಿಜೃಂಭಣೆಯಿಂದ ಅದ್ದೂರಿಯಾಗಿ ವಿಶಿಷ್ಟವಾಗಿ ನಡೆಯಲಿದೆ. ಇದರಲ್ಲಿ ಶ್ರೀ ಮಧ್ವ ವಾದಿರಾಜ ಗುರುವರ್ಯರು ಶಿರೂರು ಮಠದ ಯತಿವರ್ಯರ ಪರಂಪರೆ ಪೌರಾಣಿಕ ಚಿತ್ರಗಳು ಎದ್ದು ಕಾಣಲಿದ್ದು, ರಾಷ್ಟ್ರಾದ್ಯಂತ ಬಂದಂತಹ ಸಾಂಸ್ಕೃತಿಕ ತಂಡದಿಂದ ಪ್ರದರ್ಶನವನ್ನು ನೀಡಲಿದೆ. ಸ್ಥಳೀಯ ಕಲಾತಂಡಗಳು ಭಜನಾ ತಂಡಗಳು ಖಾಲಿಯೇನು ತಂಡಗಳು ಈ ಶೋಭಾ ಯಾತ್ರೆಯಲ್ಲಿ ಕಾಣಬಹುದಾಗಿದೆ. ಮುಂದೆ ಶ್ರೀ ಕೃಷ್ಣ ಮಠದಲ್ಲಿ ದೇವತಾ ಕಾರ್ಯಗಳು ನಡೆದು ಶ್ರೀಗಳವರು ಸರ್ವಜ್ಞ ಪೀಠವನ್ನು ಆಲಂಕರಿಸಲಿದ್ದಾರೆ.
ಈ ಬಾರಿಯ ಪರ್ಯಾಯ ಶನಿವಾರ ಮತ್ತು ಭಾನುವಾರ ವಾರಾಂತ್ಯದ ದಿನಗಳು ಬಂದಿರುವುದರಿಂದ ಸುಮಾರು ಎರಡರಿಂದ ಮೂರು ಲಕ್ಷ ಜನರನ್ನು ನಿರೀಕ್ಷಿಸಲಾಗಿದೆ.
ಪರ್ಯಾಯ ಮಹೋತ್ಸವದ ಪ್ರಯುಕ್ತ ನಗರದಲ್ಲಿ ದೀಪಾಲಂಕಾರ ಉದ್ಘಾಟನೆ ಹಾಗೂ ಶ್ರೀ ಪರಶುರಾಮ ಸ್ವಾಗತ ಗೋಪುರಕ್ಕೆ ಶಿಲಾನ್ಯಾಸ ಸಮಾರಂಭ ನಡೆದಿದೆ. ವಿದ್ಯುತ್ ದೀಪ ಅಲಂಕಾರಕ್ಕೆ 50 ಲಕ್ಷ ಬಿಡುಗಡೆಯಾಗಿದ್ದು ಈಗಾಗಲೇ ದೀಪಾಲಂಕಾರ ಕಾರ್ಯ ಪೂರ್ಣಗೊಂಡಿದೆ.
ಅನ್ನ ಸಂತರ್ಪಣೆ ಪರ್ಯಾಯ ಮುನ್ನಾ ದಿನ ಅಂದರೆ 17ರಂದು ಶನಿವಾರ ಉಡುಪಿಯ ವಿವಿಧ ಭಾಗಗಳಲ್ಲಿ ಅಂದರೆ ರಾಜಾಂಗಣದ ಪಾರ್ಕಿಂಗ್ ಪ್ರದೇಶ ನಿತ್ಯಾನಂದ ಮಂದಿರ ಬಸ್ಸು ನಿಲ್ದಾಣ ಸಮೀಪ ಬೋರ್ಡ್ ಹೈಸ್ಕೂಲ್ ಮೂರು ಕಡೆಗಳಲ್ಲಿ ಸಾರ್ವಜನಿಕರಿಗೆ ಹಾಗೂ ಗೋವಿಂದ ಕಲ್ಯಾಣ ಮಂಟಪದಲ್ಲಿ ಸಾಂಸ್ಕೃತಿಕ ಕಲಾ ತಂಡದವರಿಗೆ ಸಂಜೆ 7 ಗಂಟೆಯಿಂದ 12 ಗಂಟೆವರೆಗೆ ಅನ್ನಸಂಪರ್ಪಣೆ ನಡೆಯಲಿದೆ ಸುಮಾರು ಒಂದು ಲಕ್ಷದಷ್ಟು ಜನರು ಭಾಗವಹಿಸುವ ನಿರೀಕ್ಷೆ ಇದ್ದು, ದಿನಾಂಕ ಜನವರಿ 17 ರಿಂದ 22 ರವರೆಗೆ ಪ್ರತಿದಿನ ವಿಶೇಷ ಅನ್ನ ಸಂತರ್ಪಣೆ ನಡೆಯಲಿದ್ದು ನಾಲ್ಕರಿಂದ ಐದು ಲಕ್ಷ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ.
ದರ್ಬಾರ್ ಸಭೆ ನೂತನವಾಗಿ ನಿರ್ಮಾಣಗೊಂಡಿರುವ ರಾಜಾಂಗಣದ ವೇದಿಕೆಯನ್ನು ಹೂ ಸಿಂಗಾರಗಳಿಂದ ಎಲ್ಲಾ ಮಠದ ಮಠಾಧೀಶರೊಂದಿಗೆ ನಾಡಿನ ಗಣ್ಯರು ಭಾಗವಹಿಸಲಿದ್ದಾರೆ ಮುಂಜಾನೆ 5:30ಕ್ಕೆ ಆರಂಭವಾಗಲಿರುವ ದರ್ಬಾರ್ ಸಭೆ ಸುಮಾರು 9 ಗಂಟೆಯವರೆಗೆ ನಡೆಯಲಿದ್ದು ಈ ಸಂದರ್ಭದಲ್ಲಿ ಪರ್ಯಾಯ ದೀಕ್ಷೆ ತೆಗೆದುಕೊಂಡಿರುವ ಶ್ರೀ ಶ್ರೀ ವೇದವರ್ಧನ ತೀರ್ಥರು ಇತರ ಸ್ವಾಮೀಜಿಯವರೊಂದಿಗೆ ನಾಡಿನ ಗಣ್ಯರು ಉದ್ಯಮಿಗಳನ್ನು ಶ್ರೀಕೃಷ್ಣ ಅನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ವೇದ ವಿದ್ವಾಂಸರಿಂದ ಪ್ರವಚನ ನಡೆಯಲಿದೆ.
ಕೇಂದ್ರ ಮತ್ತು ರಾಜ್ಯದ ಸಚಿವರು ಗಣ್ಯ ವ್ಯಕ್ತಿಗಳು ಈ ಸಂದರ್ಭದಲ್ಲಿ ಭಾಗವಹಿಸಲಿದ್ದು, ದಿನಾಂಕ 18ರಿಂದ ಪ್ರತಿದಿನ ಸಂಜೆ ಹತ್ತು ದಿನಗಳ ಕಾಲ ಸಭಾ ಕಾರ್ಯಕ್ರಮ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು ಈ ಸಭೆಯಲ್ಲಿ ಕೂಡ ಅನೇಕ ಗಣ್ಯರಿಗೆ ಶ್ರೀ ಕೃಷ್ಣ ಅನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಮಠ ಶ್ರೀ ಕೃಷ್ಣ ಮಠ ಮಠದ ರಾಜಾಂಗಣ ಮತ್ತು ರಥ ಬೀದಿ ಸುತ್ತಮುತ್ತ ಹೂ ಮತ್ತು ವಿದ್ಯುತ್ ದೀಪದಿಂದ ಅಲಂಕರಿಸಲಾಗುವುದು. ಶಿರೂರು ಮಠದ ಪರ್ಯಾಯ ಮಹೋತ್ಸವದ ಈ ಸಂದರ್ಭದಲ್ಲಿ ರಾಯಚೂರು ಭಕ್ತ ವೃಂದದವರಿಂದ 250 ಕ್ವಿಂಟಲ್ ಅಕ್ಕಿ ಸುಮಾರು 12 ಲಕ್ಷದ ಮೊತ್ತದ ಅಕ್ಕಿಯನ್ನು ಪರ್ಯಾಯದ ಅನ್ನಸಂತರ್ಪಣೆಗಾಗಿ ಸಮರ್ಪಣೆಯಾಗಿದೆ.


ಶ್ರೀ ಶಿರೂರು ಮಠದ ಶ್ರೀ ವೇದವರ್ಧನ ಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಉಡುಪಿ ನಗರ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಪೂರ್ಣವಾಗಿ ಸಜ್ಜುಗೊಂಡಿದೆ. ಶ್ರೀಗಳ ಪುರ ಪ್ರವೇಶ ಆದ್ದೂರಿಯಾಗಿ ನಡೆದು ಚರಿತ್ರೆ ನಿರ್ಮಾಣವಾಗಿದ್ದು ದಿನಾಂಕ 10 ಜನವರಿಯಿಂದ ಆರಂಭವಾದ ಹಸಿರು ಹೊರೆ ಕಾಣಿಕೆ ಮಠಕ್ಕೆ ಹರಿದು ಬರುತ್ತಿದ್ದು, ಜನವರಿ 17ರ ವರೆಗೂ ಹೊರೆ ಕಾಣಿಕೆ ಹರಿದು ಬರಲಿದೆ.
ಈ ಬಾರಿಯ ಹಸಿರು ಹೊರೆ ಕಾಣಿಕೆಯಲ್ಲಿ ಸಂಗ್ರಹವಾದ ವಸ್ತುಗಳು ದಾಖಲೆ ನಿರ್ಮಾಣವಾಗಲಿದ್ದು ಕನಿಷ್ಠ ಮೂರರಿಂದ ನಾಲ್ಕು ಲಕ್ಷ ಭಕ್ತರಿಗೆ ಅನ್ನ ಸಂತರ್ಪಣೆಗೆ ಪೂರಕವಾಗಿ ಸಂಗ್ರಹ ನಡೆಯುತ್ತಿದೆ. ದಿನಂಪ್ರತಿ ಸಾವಿರಾರು ಭಕ್ತರು ಇದರಲ್ಲಿ ಭಾಗವಹಿಸುತ್ತಿದ್ದಾರೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು