4:18 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

30/06/2026, 18:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಜನಾಂದೋಲನ ಹಿಂದೂ ಸಂಘಟನೆ ವತಿಯಿಂದ ಇಂದು, ಮಂಗಳವಾರ ಕರೆ ನೀಡಲಾಗಿದ್ದ ಸ್ವಯಂಪ್ರೇರಿತ ಬಂದ್‌ಗೆ ಕುಶಾಲನಗರ ಪಟ್ಟಣದ ವರ್ತಕರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಹಕರಿಸಿದರು.


ಮತಾಂತರ ಆರೋಪ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಖಂಡಿಸಿ ನಡೆಯುತ್ತಿರುವ ಬೃಹತ್ ಜಾಗೃತಿ ಜಾಥಾ ಹಾಗೂ ಪ್ರತಿಭಟನೆಗೆ ನೈತಿಕ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ವರ್ತಕ ಸಂಘ ಸ್ವಯಂಪ್ರೇರಣೆಯಿಂದ ಬಂದ್‌ಗೆ ಕರೆ ನೀಡಿತ್ತು.

*ಸಂಪೂರ್ಣ ಸ್ತಬ್ಧಗೊಂಡ ವ್ಯಾಪಾರ:* ಪಟ್ಟಣದ ಮುಖ್ಯರಸ್ತೆ, , ಐ.ಬಿ.ಸರ್ಕಲ್, ಬಸ್ ನಿಲ್ದಾಣ ರಸ್ತೆ, ಎನ್‌.ಟಿ.ಸಿ ವಾಣಿಜ್ಯ ಸಂಕೀರ್ಣ ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿದ್ದವು. ಹೋಟೆಲ್, ದಿನಸಿ ಅಂಗಡಿ, ಬಟ್ಟೆ ಅಂಗಡಿ, ಜ್ಯುವೆಲ್ಲರಿ, ವಾಹನ ಶೋರೂಂಗಳು ಸಂಪೂರ್ಣ ಮುಚ್ಚಿದ್ದವು.

*ಶಾಂತಿಯುತ ಬಂದ್:* ಇದು ಯಾವುದೇ ಬಲವಂತದ ಬಂದ್ ಆಗಿರಲಿಲ್ಲ. ಸಮುದಾಯದ ಹಿತದೃಷ್ಟಿಯಿಂದ ವರ್ತಕರೆಲ್ಲರೂ ಸ್ವಯಂಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿ ಜಾಥಾಗೆ ಬೆಂಬಲ ಸೂಚಿಸಿದರು. ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್ ಶಾಪ್, ಹಾಲಿನ ಬೂತ್‌ಗಳು ಮಾತ್ರ ಎಂದಿನಂತೆ ಕಾರ್ಯನಿರ್ವಹಿಸಿದವು. *ಜನಜಾಗೃತಿ ಜಾಥಾ* ಜನಾಂದೋಲನ ಹಿಂದೂ ಸಂಘಟನೆ ನೇತೃತ್ವದಲ್ಲಿ ಕಾವೇರಿ ನಿಸರ್ಗಧಾಮದಿಂದ ಬೃಹತ್ ಜಾಗೃತಿ ಜಾಥಾ ಮೆರವಣಿಗೆ ನಡೆಸಲಾಯಿತು. ಹಿಂದೂ ಜಾಗರಣ ವೇದಿಕೆ, ಬಜರಂಗದಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ 20ಕ್ಕೂ ಹೆಚ್ಚು ಹಿಂದೂ ಪರ ಸಂಘಟನೆಗಳು, ಮಹಿಳೆಯರು, ಯುವಕರು ಜಾಥಾ ದಲ್ಲಿ ಪಾಲ್ಗೊಂಡರು.

*ವರ್ತಕರ ಹೇಳಿಕೆ:* “ಧಾರ್ಮಿಕ ಅಸ್ಮಿತೆ ಉಳಿಸುವ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ. ಆದ್ದರಿಂದ ಇಂದು ಸ್ವಯಂಪ್ರೇರಣೆಯಿಂದ ವ್ಯಾಪಾರ ಬಂದ್ ಮಾಡಿದ್ದೇವೆ” ಎಂದು ವರ್ತಕರ ಸಂಘದ ಪ್ರಮುಖರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು