1:00 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ಆರೋಪ: ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ವಿರುದ್ಧ ಎಫ್ ಐಆರ್

20/07/2025, 11:35

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಪೂಮಾಲೆ ವಾರಪತ್ರಿಕೆ ಸಂಪಾದಕ ಅಜ್ಜನಿಕಂಡ ಮಹೇಶ್ ನಾಚಯ್ಯ ಅವರು,
ವಾಟ್ಸಪ್ ಗ್ರೂಪ್ ಗಳಲ್ಲಿ ವೈಯಕ್ತಿಕ
ದ್ವೇಷದಿಂದ ಮಾನಹಾನಿಕಾರಕವಾಗಿ ನನ್ನನ್ನು ಚಿತ್ರಿಸಿ ತೇಜೋವಧೆ ಮಾಡಿದ್ದಾರೆ” ಎಂದು ಆರೋಪಿಸಿ ಬ್ರಹ್ಮಗಿರಿ ವಾರಪತ್ರಿಕೆ ಉಪ ಸಂಪಾದಕಿ ಉಳ್ಳಿಯಡ ಡಾಟಿ ಪೂವಯ್ಯ ಅವರು ಮಡಿಕೇರಿ ಮಹಿಳಾ ಪೊಲೀಸ್ ಠಾಣೆಗೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಅಜ್ಜನಿಕಂಡ ಮಹೇಶ್ ನಾಚಯ್ಯರವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

*ದೂರಿನಲ್ಲಿ ಏನಿದೆ;?*
ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಪೂಮಾಲೆ ವಾರಪತ್ರಿಕೆ ಸಂಪಾದಕ ಅಜ್ಜನಿಕಂಡ ಮಹೇಶ್ ನಾಚಯ್ಯ ಅವರು, ವೈಯಕ್ತಿಕ ದ್ವೇಷ ಎಂಬಂತೆ ಮಾನಹಾನಿ ಮಾಡುವ ಉದ್ದೇಶದಿಂದ 06-07-2025 ರಂದು ಸಾಮಾಜಿಕ ಜಾಲತಾಣವಾದ ವಾಟ್ಸಪ್ ಗುಂಪುಗಳಲ್ಲಿ ಹಾಗೂ ಬೇರೆಯವರ ವಾಟ್ಸಪ್ ನಂಬರ್ ಗಳಿಗೆ ಕೊಡವ ಭಾಷೆಯಲ್ಲಿ ತೀರಾ ಆಕ್ಷೇಪಣೆಕಾರಿಯಾಗಿಯೂ ಮತ್ತು ಆಘಾತಕಾರಿಯಾಗಿಯೂ ಟಿಪ್ಪಣಿ ಬರೆದು, ಸುಮಾರು ಇಪ್ಪತ್ತು ವರ್ಷದ ಹಿಂದೆ ಆಗಿ ಹೋದ ಘಟನೆಯನ್ನೂ, ಅಂದು ನ್ಯಾಯಾಲಯ ನಿರಪರಾಧಿ ಎಂದು ಘೋಷಿಸಿರುವುದನ್ನು ಲೆಕ್ಕಿಸದೆ ವ್ಯಾಪಕ ಪ್ರಚಾರ, ತೇಜೋವಧೆ ಮಾಡಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತೆ ಮಾಡಿರುತ್ತಾರೆ. ತಪ್ಪಿತಸ್ಥೆ ಅಲ್ಲವೆಂದು ಮಡಿಕೇರಿ ನ್ಯಾಯಾಲಯವು ತೀರ್ಪು ಹೊರಡಿಸಿರುವುದನ್ನು ಮರೆಮಾಚಿ
ಅಂದು ಕುತಂತ್ರಿಗಳು ಅರೋಪಿಸಿದ್ದ ಹಳೇ ವದಂತಿಗಳನ್ನು ಫೋಟೋ ಸಮೇತ ಪ್ರಕಟಿಸಿ ಎಲ್ಲ ಗ್ರೂಪ್ ಗಳಿಗೆ ಹರಡಿ ಆರೋಪ, ಅಸಹ್ಯಕರ ಲೈಂಗಿಕ ಛಾಯೆ ಬರುವಂತಹ ಶಬ್ದ ಬಳಸಿ ಆಕ್ಷೇಪವಾದ ವಾಕ್ಯಗಳನ್ನು ದುರುದ್ದೇಶದಿಂದ ಬಳಸಿ ಲೈಂಗಿಕವಾಗಿ ಬಣ್ಣದ ಟೀಕೆಗಳ ಪದಗಳನ್ನು ಉಪಯೋಗಿಸಿ ಕಿರುಕುಳ ಕೊಟ್ಟಿದ್ದು ಕಳಂಕಿತ ಮಹಿಳೆ ಎಂಬಂತೆ ಬಿಂಬಿಸಿ ಮಾನಸಿಕ ಆಘಾತ ಉಂಟು ಮಾಡಿರುತ್ತಾರೆ. ಇದರಿಂದ ಮಾನಸಿಕವಾಗಿ ಬಹಳಷ್ಟು ನೊಂದು ಕುಗ್ಗಿ ಹೋಗಿರುತ್ತೇನೆ. ಆದ್ದರಿಂದ ಅಜ್ಜನಿಕಂಡ ಮಹೇಶ್ ನಾಚಯ್ಯ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಡಾಟಿ ಪೂವಯ್ಯ ಅವರು ಮಡಿಕೇರಿ ಮಹಿಳಾ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಕೋರಿದ್ದಾರೆ.
ಇವರ ಪುಕಾರನ್ನು ದಾಖಲಿಸಿಕೊಂಡಿರುವ ಪೊಲೀಸರು, ಮಹೇಶ್ ನಾಚಯ್ಯರವರ ವಿರುದ್ಧ BNS 2023 ರ ಸೆಕ್ಷನ್ 75(1) (iv) ಅಡಿಯಲ್ಲಿ FIR ದಾಖಲಿಸಿಕೊಂಡು ಪ್ರಿನ್ಸ್ಪಲ್ ಸಿವಿಲ್ ಜಡ್ಜ್ (ಜೂನಿಯರ್ ಡಿವಿಷನ್ ಮತ್ತು JMFC ಮಡಿಕೇರಿ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು