2:33 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಬ್ಯೂಟಿಪಾರ್ಲರ್ – ಸ್ಪಾ ಮಸಾಜ್ ಸೆಂಟರ್ ಹೆಸರಿನಲ್ಲಿ ವೇಶ್ಯಾವಾಟಿಕೆ ಆರೋಪ: ಇಬ್ಬರ ವಿರುದ್ದ ಪ್ರಕರಣ ದಾಖಲು; 6 ಮಂದಿ ಮಹಿಳೆಯರ ರಕ್ಷಣೆ

20/09/2025, 10:37

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಖಾಸಗಿ ಕಟ್ಟಡವನ್ನು ಭಾಡಿಗೆಗೆ ಪಡೆದು ಬ್ಯೂಟಿಪಾರ್ಲರ್ ನೊಂದಿಗೆ ಪರವಾನೆಗೆ ಇಲ್ಲದೇ ಸ್ಪಾ ಸೆಂಟರ್ ನಡೆಸುತಿದ್ದ ಕೇರಳ ಮೂಲದ ಇಬ್ಬರು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ವಿರಾಜಪೇಟೆ ನಗರದಲ್ಲಿ ನಡೆದಿದೆ.
ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪ್ರದೀಪನ್ ಮತ್ತು ಶಿಜು ಎಂಬಿಬ್ಬರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳಾಗಿದ್ದು ಇವರ ವಿರುದ್ಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿರಾಜಪೇಟೆ ಗಾಂಧಿನಗರದಲ್ಲಿ ಖಾಸಗಿ ಕಟ್ಟಡವೊಂದನ್ನು ಬಾಡಿಗೆಗೆ ಪಡೆದಿದ್ದ ಪ್ರದೀಪನ್ ಮತ್ತು ಶಿಜು ಎಂಬುವವರು ಆರೇಂಜ್ ಫ್ಯಾಮಿಲಿ ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಸೆಂಟರ್ ನಡೆಸುತ್ತಿದ್ದರು. ಇಲ್ಲಿ ಸುಮಾರು 6 ತಿಂಗಳಿನಿಂದ ಹೊರ ರಾಜ್ಯಗಳ ಐಷಾರಾಮಿ ವಾಹನಗಳು ಬಂದು ನಿಲುಗಡೆಗೊಂಡು ಮರಳುತ್ತಿದ್ದವು. ಈ ಸೆಂಟರ್ ನಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸ್ಥಳೀಯರಲ್ಲಿ ಸಂಶಯ ಮೂಡಿಸಿತ್ತು ಅಲ್ಲದೇ ಕೆಲವರು ಮೌಖಿಕವಾಗಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ದಿನಾಂಕ 18-09-2025 ರಂದು ಬ್ಯೂಟಿ ಪಾರ್ಲರ್ ಮೇಲೆ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಪರವಾನಗೆ ಪಡೆದು ಅಕ್ರಮವಾಗಿ ಸ್ವಾ ಮಸಾಜ್ ಸೆಂಟರ್ ನಡೆಸುತ್ತಿರುವುದು ತಿಳಿದುಬಂದಿದೆ. ಅಲ್ಲದೆ ಕೆಲವು ಯುವತಿಯರನ್ನು ಮತ್ತು ಮಹಿಳೆಯರನ್ನು ಗಿರಾಕಿಗಳಿಗೆ ಪೂರೈಸುತ್ತಿದ್ದುದು ಮೇಲ್ನೋಟಕ್ಕೆ ಕಂಡುಬಂದಿದೆ.
ದಾಳಿಯ ವೇಳೆ ಕೊಡಗು ಜಿಲ್ಲೆಯ ಮತ್ತು ಮಂಗಳೂರು ಹಾಗೂ ತಮಿಳುನಾಡು ಮೂಲದ ಆರು ಮಹಿಳೆಯರನ್ನು ಪೊಲಿಸರು ರಕ್ಷಣೆ ಮಾಡಿ, ಆರೋಪಿಗಳಾದ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪ್ರದೀಪನ್ ಮತ್ತು ಶಿಜು ಎಂಬಿಬ್ಬರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು