3:15 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬ್ಯೂಟಿಪಾರ್ಲರ್ – ಸ್ಪಾ ಮಸಾಜ್ ಸೆಂಟರ್ ಹೆಸರಿನಲ್ಲಿ ವೇಶ್ಯಾವಾಟಿಕೆ ಆರೋಪ: ಇಬ್ಬರ ವಿರುದ್ದ ಪ್ರಕರಣ ದಾಖಲು; 6 ಮಂದಿ ಮಹಿಳೆಯರ ರಕ್ಷಣೆ

20/09/2025, 10:37

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಖಾಸಗಿ ಕಟ್ಟಡವನ್ನು ಭಾಡಿಗೆಗೆ ಪಡೆದು ಬ್ಯೂಟಿಪಾರ್ಲರ್ ನೊಂದಿಗೆ ಪರವಾನೆಗೆ ಇಲ್ಲದೇ ಸ್ಪಾ ಸೆಂಟರ್ ನಡೆಸುತಿದ್ದ ಕೇರಳ ಮೂಲದ ಇಬ್ಬರು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ವಿರಾಜಪೇಟೆ ನಗರದಲ್ಲಿ ನಡೆದಿದೆ.
ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪ್ರದೀಪನ್ ಮತ್ತು ಶಿಜು ಎಂಬಿಬ್ಬರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳಾಗಿದ್ದು ಇವರ ವಿರುದ್ಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿರಾಜಪೇಟೆ ಗಾಂಧಿನಗರದಲ್ಲಿ ಖಾಸಗಿ ಕಟ್ಟಡವೊಂದನ್ನು ಬಾಡಿಗೆಗೆ ಪಡೆದಿದ್ದ ಪ್ರದೀಪನ್ ಮತ್ತು ಶಿಜು ಎಂಬುವವರು ಆರೇಂಜ್ ಫ್ಯಾಮಿಲಿ ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಸೆಂಟರ್ ನಡೆಸುತ್ತಿದ್ದರು. ಇಲ್ಲಿ ಸುಮಾರು 6 ತಿಂಗಳಿನಿಂದ ಹೊರ ರಾಜ್ಯಗಳ ಐಷಾರಾಮಿ ವಾಹನಗಳು ಬಂದು ನಿಲುಗಡೆಗೊಂಡು ಮರಳುತ್ತಿದ್ದವು. ಈ ಸೆಂಟರ್ ನಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸ್ಥಳೀಯರಲ್ಲಿ ಸಂಶಯ ಮೂಡಿಸಿತ್ತು ಅಲ್ಲದೇ ಕೆಲವರು ಮೌಖಿಕವಾಗಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ದಿನಾಂಕ 18-09-2025 ರಂದು ಬ್ಯೂಟಿ ಪಾರ್ಲರ್ ಮೇಲೆ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಪರವಾನಗೆ ಪಡೆದು ಅಕ್ರಮವಾಗಿ ಸ್ವಾ ಮಸಾಜ್ ಸೆಂಟರ್ ನಡೆಸುತ್ತಿರುವುದು ತಿಳಿದುಬಂದಿದೆ. ಅಲ್ಲದೆ ಕೆಲವು ಯುವತಿಯರನ್ನು ಮತ್ತು ಮಹಿಳೆಯರನ್ನು ಗಿರಾಕಿಗಳಿಗೆ ಪೂರೈಸುತ್ತಿದ್ದುದು ಮೇಲ್ನೋಟಕ್ಕೆ ಕಂಡುಬಂದಿದೆ.
ದಾಳಿಯ ವೇಳೆ ಕೊಡಗು ಜಿಲ್ಲೆಯ ಮತ್ತು ಮಂಗಳೂರು ಹಾಗೂ ತಮಿಳುನಾಡು ಮೂಲದ ಆರು ಮಹಿಳೆಯರನ್ನು ಪೊಲಿಸರು ರಕ್ಷಣೆ ಮಾಡಿ, ಆರೋಪಿಗಳಾದ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪ್ರದೀಪನ್ ಮತ್ತು ಶಿಜು ಎಂಬಿಬ್ಬರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು