5:06 PM Tuesday7 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ ಆಗ್ರಹ

07/07/2026, 16:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ನಡುವೆಯೇ ಮೂಗ್ರಹಳ್ಳಿ ಗ್ರಾಮದ ಹೇಮಾವತಿ ನದಿ ಸೇತುವೆಯ ತಡೆಗೋಡೆ ನಿರ್ಮಾಣ ಕಾಮಗಾರಿ ತರಾತುರಿಯಲ್ಲಿ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕಾಮಗಾರಿ ಸಲುವಾಗಿ ಮುಖ್ಯ ರಸ್ತೆಯ ಪಕ್ಕದಲ್ಲೇ ಸುಮಾರು 20 ಅಡಿ ಆಳದ ಗುಂಡಿಗಳನ್ನು ತೋಡಲಾಗಿದ್ದು, ಅಪಾಯವನ್ನು ತಡೆಯಲು ಅಗತ್ಯವಾದ ಬ್ಯಾರಿಕೇಡ್‌ಗಳು ಅಥವಾ ಎಚ್ಚರಿಕೆ ಫಲಕಗಳನ್ನು ಅಳವಡಿಸಿಲ್ಲ ಎಂದು ಅವರು ತಿಳಿಸಿದ್ದಾರೆ. ಇದರಿಂದ ವಾಹನ ಸವಾರರು ಹಾಗೂ ಪ್ರಾಣಿಗಳು ಗುಂಡಿಗೆ ಬಿದ್ದು ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದ್ದು, ಜೀವಹಾನಿಯ ಭೀತಿಯೂ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.


ಭಾರೀ ಮಳೆಯ ಸಂದರ್ಭದಲ್ಲಿ ಇಂತಹ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಆದ್ದರಿಂದ ಕಾಮಗಾರಿಯ ಗುಣಮಟ್ಟ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಪರಿಗಣಿಸಿ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು. ಜೊತೆಗೆ ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಬ್ಯಾರಿಕೇಡ್‌ಗಳು, ಎಚ್ಚರಿಕೆ ಫಲಕಗಳು ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ತಕ್ಷಣವೇ ಅಳವಡಿಸಬೇಕು ಎಂದು ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು