11:07 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಆಲ್ಕೋಡ ಗ್ರಾಮ ಪಂಚಾಯಿತಿನಲ್ಲಿ ಭಾರಿ ಭ್ರಷ್ಟಾಚಾರ: ನಕಲಿ ಬಿಲ್ ಸೃಷ್ಟಿಸಿ 10 ಲಕ್ಷ ರೂ. ಗುಳುಂ: ನಡೆಯದ ಕಾಮಗಾರಿಯ ಹೆಸರಿನಲ್ಲೂ ಬಿಲ್! 

10/06/2021, 16:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮ ಪಂಚಾಯಿತಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸುಮಾರು 10 ಲಕ್ಷ ರೂ. ವಂಚಿಸಿದ ಆರೋಪ ಕೇಳಿ ಬಂದಿದೆ. ಈ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿಗೂ ದೂರು ನೀಡಲಾಗಿದೆ. 

ಆಲ್ಕೋಡ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ  ಪ್ರಕರಣ ಬೆಳಕಿಗೆ ಬಂದಿದ್ದು, ಸುಮಾರು 10 ಲಕ್ಷ ರೂ. ಗುಳಂ ಮಾಡಿರುವ ಆರೋಪ ಕೇಳಿ ಬಂದಿದೆ. ಶಾವಂತಗಲ್ ಗ್ರಾಮದ ಬೀದಿ ದೀಪಗಳ ಹೆಸರಿನಲ್ಲಿ 50 ಸಾವಿರ ರೂಪಾಯಿ, ಕುಡಿಯುವ ನೀರಿನ ನಿರ್ವಹಣೆಗೆ 40 ಸಾವಿರ ರೂ. ಹಾಗೂ ಇತರ ನಡೆಯದ ಕಾಮಗಾರಿಯ ನಕಲಿ ದಾಖಲೆ ಸೃಷ್ಟಿಸಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹನುಮಂತ ಶಾವಂತಗಲ್ ಹಾಗೂ  ಗ್ರಾಮ ಪಂಚಾಯಿತಿನ ಇತರ ಐವರು ಸದಸ್ಯರು ಆರೋಪಿಸಿದ್ದಾರೆ.

ಆಲ್ಕೋಡ ಗ್ರಾಮಗಳಲ್ಲಿ ಫಾಗಿಂಗ್ ನಡೆಸಿದ ಹೆಸರಿನಲ್ಲೂ ಹಣ ದುರುಪಯೋಗ ಮಾಡಲಾಗಿದೆ. 15ನೇ ಹಣಕಾಸು ಯೋಜನೆಯಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿದನ್ನು ಇತರ ಸದಸ್ಯರ ಗಮನಕ್ಕೆ ತರಲಿಲ್ಲ. ಪಂಚಾಯಿತಿ ಅಧ್ಯಕ್ಷರು ಹಾಗೂ

 ಅಭಿವೃದ್ಧಿ ಅಧಿಕಾರಿ ಸೇರಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು  ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದೂರು ನೀಡಲಾಗಿದೆ. ಅವ್ಯವಹಾರ ಬಗ್ಗೆ ದೂರು ಬಂದಿದೆ. ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಾಪಂ ಕಾರ್ಯನಿರ್ವಾಹಣಾಧಿಕಾರಿ ಪಂಪಾಪತಿ ಹಿರೇಮಠ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು