2:37 AM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಜತೆ ಕುಡುಪು ಗುಂಪು ಹತ್ಯೆ, ರೆಹ್ಮಾನ್ ಕೊಲೆಯನ್ನೂ ಎನ್‌ಐಎಗೆ ನೀಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

09/06/2025, 23:31

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೂವರೆ ತಿಂಗಳಿನಿಂದೀಚೆಗೆ ನಡೆದಿರುವ ಮೂರು ಕೊಲೆ ಪ್ರಕರಣಗಳು ಇಡೀ ಕರಾವಳಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕೊಲೆಗಳು ಒಂದಕ್ಕೊಂದು ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆಯಿದ್ದು, ಈ ಮೂರು ಪ್ರಕರಣಗಳನ್ನು ಕೂಡ ಎನ್ ‌ಐಎ ತನಿಖೆಗೆ ವಹಿಸಿದರೆ ದುಷ್ಜೃತ್ಯದ ಹಿಂದಿನ ಸತ್ಯ ಬಯಲಿಗೆ ಬರಲಿದೆ ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
ಕೇಂದ್ರ ಗೃಹ ಇಲಾಖೆಯು ಬಜಪೆ ಕಿನ್ನಿಪದವಿನಲ್ಲಿ ನಡೆದ ಸುಹಾಸ್ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಿದೆ. ಇದೇ ಮಾದರಿಯಲ್ಲಿ ಕುಡುಪುವಿನಲ್ಲಿ ಏ.27ರಂದು ಅಶ್ರಫ್ ಎಂಬಾತನನ್ನು ಗುಂಪು ಹತ್ಯೆ ಮಾಡಲಾಗಿದೆ. ಇದಾದ ಬಳಿಕ ಬಜಪೆ ಕಿನ್ನಿಪದವಿನಲ್ಲಿ ಮೇ 1ರಂದು ಸುಹಾಸ್ ಶೆಟ್ಟಿ ಕೊಲೆ ನಡೆದರೆ, ಈ ಘಟನೆ ನಡೆದ ಕೆಲವೇ ದಿನದ ಬಳಿಕ ಮೇ 27ರಂದು ಕುರಿಯಾಳ ಕಾಂಬೋಡಿ ಬಳಿ ಅಬ್ದುಲ್ ರಹೀಮಾನ್ ಕೊಲೆಯಾಗುತ್ತದೆ. ಈ ಮೂರು ಪ್ರಕರಣಗಳು ಒಂದಕ್ಕೊಂದು ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆಯಿದ್ದು, ಈ ಹಿನ್ನಲೆಯಲ್ಲಿ ಕೇಂದ್ರ ಸರಕಾರ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಬಳಿಯುವ ಬದಲು ಮೂರು ಪ್ರಕರಣಗಳನ್ನು ಎನ್‌ ಐಎ ವಹಿಸಲಿ. ಆಗ ಇಡೀ ಕರಾವಳಿಯ ಕೋಮು ಸಂಘರ್ಷದ ಜಾಲ ಬಯಲಾಗಲಿದೆ. ನಾಗರಿಕರಿಗೂ ಇದರ ಹಿಂದಿರುವ ಸತ್ಯವನ್ನು ಅರಿಯಬಹುದಾಗಿದೆ. ಈ ಕಾರಣದಿಂದ ಕೇಂದ್ರ ಸರಕಾರ ಮೂರು ಪ್ರಕರಣವನ್ನು ಎನ್‌ಐಎಗೆ ವಹಿಸಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು