11:38 PM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಜತೆ ಕುಡುಪು ಗುಂಪು ಹತ್ಯೆ, ರೆಹ್ಮಾನ್ ಕೊಲೆಯನ್ನೂ ಎನ್‌ಐಎಗೆ ನೀಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

09/06/2025, 23:31

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೂವರೆ ತಿಂಗಳಿನಿಂದೀಚೆಗೆ ನಡೆದಿರುವ ಮೂರು ಕೊಲೆ ಪ್ರಕರಣಗಳು ಇಡೀ ಕರಾವಳಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕೊಲೆಗಳು ಒಂದಕ್ಕೊಂದು ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆಯಿದ್ದು, ಈ ಮೂರು ಪ್ರಕರಣಗಳನ್ನು ಕೂಡ ಎನ್ ‌ಐಎ ತನಿಖೆಗೆ ವಹಿಸಿದರೆ ದುಷ್ಜೃತ್ಯದ ಹಿಂದಿನ ಸತ್ಯ ಬಯಲಿಗೆ ಬರಲಿದೆ ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
ಕೇಂದ್ರ ಗೃಹ ಇಲಾಖೆಯು ಬಜಪೆ ಕಿನ್ನಿಪದವಿನಲ್ಲಿ ನಡೆದ ಸುಹಾಸ್ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಿದೆ. ಇದೇ ಮಾದರಿಯಲ್ಲಿ ಕುಡುಪುವಿನಲ್ಲಿ ಏ.27ರಂದು ಅಶ್ರಫ್ ಎಂಬಾತನನ್ನು ಗುಂಪು ಹತ್ಯೆ ಮಾಡಲಾಗಿದೆ. ಇದಾದ ಬಳಿಕ ಬಜಪೆ ಕಿನ್ನಿಪದವಿನಲ್ಲಿ ಮೇ 1ರಂದು ಸುಹಾಸ್ ಶೆಟ್ಟಿ ಕೊಲೆ ನಡೆದರೆ, ಈ ಘಟನೆ ನಡೆದ ಕೆಲವೇ ದಿನದ ಬಳಿಕ ಮೇ 27ರಂದು ಕುರಿಯಾಳ ಕಾಂಬೋಡಿ ಬಳಿ ಅಬ್ದುಲ್ ರಹೀಮಾನ್ ಕೊಲೆಯಾಗುತ್ತದೆ. ಈ ಮೂರು ಪ್ರಕರಣಗಳು ಒಂದಕ್ಕೊಂದು ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆಯಿದ್ದು, ಈ ಹಿನ್ನಲೆಯಲ್ಲಿ ಕೇಂದ್ರ ಸರಕಾರ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಬಳಿಯುವ ಬದಲು ಮೂರು ಪ್ರಕರಣಗಳನ್ನು ಎನ್‌ ಐಎ ವಹಿಸಲಿ. ಆಗ ಇಡೀ ಕರಾವಳಿಯ ಕೋಮು ಸಂಘರ್ಷದ ಜಾಲ ಬಯಲಾಗಲಿದೆ. ನಾಗರಿಕರಿಗೂ ಇದರ ಹಿಂದಿರುವ ಸತ್ಯವನ್ನು ಅರಿಯಬಹುದಾಗಿದೆ. ಈ ಕಾರಣದಿಂದ ಕೇಂದ್ರ ಸರಕಾರ ಮೂರು ಪ್ರಕರಣವನ್ನು ಎನ್‌ಐಎಗೆ ವಹಿಸಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು