11:24 AM Wednesday30 - July 2025
ಬ್ರೇಕಿಂಗ್ ನ್ಯೂಸ್
Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ಆಳ್ವಾಸ್ ರಂಗ ಅಧ್ಯಯನ ಕೇಂದ್ರದಿಂದ ಡಾ. ಹಂ.ಪ.ನಾಗರಾಜಯ್ಯ ಅವರ ‘ಚಾರುವಸಂತ’ ಪ್ರಸ್ತುತಿ

31/10/2023, 23:25

ಮೂಡುಬಿದಿರೆ(reporterarnataka.com): ಸರ್ವ ಜನಾಂಗದ ಶಾಂತಿಯ ತೋಟವಾದ ಭಾರತದ ಕುಟುಂಬದ ಬಿಂಬ ‘ಚಾರು ವಸಂತ’ ಎಂದು ಹಿರಿಯ ಸಂಶೋಧಕ ಹಾಗೂ ಕೃತಿಕಾರ ಡಾ. ಹಂ.ಪ.ನಾಗರಾಜಯ್ಯ
(ಹಂಪನಾ)ಹೇಳಿದರು.

ಇಲ್ಲಿನ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರು ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ನಿರ್ದೇಶನದಲ್ಲಿ ಪ್ರಸ್ತುತ ಪಡಿಸಿದ ತಮ್ಮ (ಡಾ.ಹಂ.ಪ.ನಾಗರಾಜಯ್ಯ) ‘ಚಾರುವಸಂತ’ ನಾಟಕವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಇದು ನನ್ನ ಕನಸು ನನಸಾದ ದಿನ. ನಾನು ಯುವಕ ಅಲ್ಲ. ಆದರೆ, ‘ಬಯಸುತ್ತೇನೆ ನಿಮ್ಮ ಆಮ್ಲಜನಕ’ ಎಂದು ಭಾವುಕರಾದರು. ಭಾರತೀಯ ಮಾತ್ರವಲ್ಲ ಎಲ್ಲ ಕುಟುಂಬಗಳಲ್ಲೂ ಏಳುಗಾಲ ಹಾಗೂ ಬೀಳುಗಾಲ ಇರುತ್ತದೆ. ಏಳುಬೀಳುಗಳ ಜೀವನದ ಕಥನವೇ ‘ಚಾರುವಸಂತ’ ಎಂದರು.
ಎಲ್ಲ ಧರ್ಮ, ಮತವನ್ನು ಗೌರವಿಸಬೇಕು. ದ್ವೇಷ, ಅಸೂಯೆ, ಈರ್ಷೆ ಬಿಟ್ಟು ಬಿಡಬೇಕು. ಪರಿಸರ ಸಂರಕ್ಷಿಸಬೇಕು ಎಂಬ ಸಂದೇಶವಿದೆ ಎಂದರು. ಮೋಹನ ಆಳ್ವರ ಅಂತರಂಗಕ್ಕೆ ಬಿದ್ದ ಯಾವುದೇ ಕಲೆಯು ಕೃತಿಯಾಗುತ್ತದೆ ಎಂದು ಅವರು ಶ್ಲಾಘಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮಾತನಾಡಿ, ಕೃತಿಗಳು ಹೆಚ್ಚು ಮಾತನಾಡಬೇಕು. ವ್ಯಕ್ತಿಗಳಲ್ಲ ಎಂದರು. ಪರಿಸರ ರಕ್ಷಣೆಯ ಮಹತ್ವ ನಾಟಕದಲ್ಲಿದೆ. ಧರ್ಮ, ಜಾತಿ ಮುಖ್ಯವಲ್ಲ, ಸೌಹಾರ್ದತೆ ಮುಖ್ಯ. ಸುಖ- ದುಖ ಸಮಾನವಾಗಿ ಸ್ವೀಕರಿಸಿ ಎಂಬ ಸಂದೇಶ ನಾಟಕದಲ್ಲಿದೆ ಎಂದರು.
ಹಂಪನಾ ಅವರು ಆಳ್ವಾಸ್ ನುಡಿಸಿರಿಯ ಸರ್ವಾಧ್ಯಕ್ಷತೆ ವಹಿಸಿದ್ದರು. ಅವರ ಪತ್ನಿ ಕಮಲಾ ಹಂಪನಾ ಮೂಡುಬಿದಿರೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ರಾಗಿದ್ದರು. ಅವರ ಕುಟುಂಬದ ಜೊತೆ ನಮಗೆಲ್ಲ ಅವಿನಾಭಾವ ನಂಟಿದ ಎಂದು ನೆನಪಿಸಿಕೊಂಡರು.
ನಾಟಕ ಎಂದರೆ ನಿರ್ದೇಶಕನ ಕೈಚಳಕ. ಜೀವನ್ ರಾಂ ಸುಳ್ಯ ಅವರು ನಾಟಕವನ್ನು ರಂಗ ರೂಪಕ್ಕೆ ತಂದ ಬೆರಗನ್ನು ನೋಡಿದರೆ ಹಂಪನಾ ಮೂಕವಿಸ್ಮಿತರಾಗುವರು ಎಂದು ಶ್ಲಾಘಿಸಿದರು.
ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ ರಾಂ ಸುಳ್ಯ ಮಾತನಾಡಿ, ೨೦೦೩ರಲ್ಲಿ ಹಂಪನಾ ಬರೆದ ಚಾರುವಸಂತವನ್ನು ಡಾ.ಎಂ.ಮೋಹನ ಆಳ್ವರ ಆಶಯದಂತೆ ನಿರ್ದೇಶಿಸಲಾಗಿದೆ. ರಂಗಕರ್ಮಿ ಡಾ. ನಾ.ದಾ. ಶೆಟ್ಟಿ ರಂಗರೂಪ ನೀಡಿದ್ದಾರೆ. ಸುಮಾರು ಎರಡು ವರ್ಷಗಳ ಈ ಪಯಣವು ಮೂಡುಬಿದಿರೆ ಮೂಲಕ ರಾಜ್ಯದಾದ್ಯಂತ ತಿರುಗಾಟ ನಡೆಸಲಿದೆ ಎಂದರು.
ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮಹಮ್ಮದ್ ಸದಾಕತ್ ಇದ್ದರು. ಉಪನ್ಯಾಸಕ ವೇಣುಗೋಪಾಲ ಕೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಎಲ್ಲೆಲ್ಲಿ?: ಚಾರುವಸಂತ ನಾಟಕವು
ನ.೦೨ ರಂದು ರವೀಂದ್ರ ಕಲಾಕ್ಷೇತ್ರ ಬೆಂಗಳೂರು, ನ.೦೪ ಡಾ.ಎಚ್.ಎನ್.ಕಲಾಮಂದಿರ ಗೌರಿಬಿದನೂರು, ನ.೦೬ ಗುಬ್ಬಿ ವೀರಣ್ಣ ಕಲಾಮಂದಿರ ತುಮಕೂರು, ನ.೦೮ ರಂದು ತ.ರಾ.ಸು. ರಂಗಮAದಿರ ಚಿತ್ರದುರ್ಗ, ನ.೧೦ ರಂದು ಮಲ್ಲಿಕಾರ್ಜುನ ರಂಗಮAದಿರ ದಾವಣಗೆರೆ, ನ.೧೨ ಡಾ.ಪಾಟೀಲ ಪುಟ್ಟಪ್ಪ ಸಭಾಭವನ ಧಾರವಾಡ ಹಾಗೂ ನ.೧೫ ರಂದು ರಂಗಮನೆ ಸುಳ್ಯದಲ್ಲಿ ಪ್ರದರ್ಶನಗೊಳ್ಳಲಿದೆ

ಇತ್ತೀಚಿನ ಸುದ್ದಿ

ಜಾಹೀರಾತು