4:19 PM Friday12 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಆಳ್ವಾಸ್ ನಲ್ಲಿ ರಾಜ್ಯಮಟ್ಟದ ಸ್ಕೌಟ್ಸ್-ಗೈಡ್ಸ್, ರೋವರ್ಸ್- ರೇಂಜರ್ಸ್ ಸಾಂಸ್ಕೃತಿಕ ಉತ್ಸವ

05/12/2024, 23:04

ಮಂಗಳೂರು(reporterkarnataka.com):ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿ ಶಿಬಿರ ಆಯೋಜಿಸಿದೆ.
ದಿನವೊಂದಕ್ಕೆ ಆರು ವಿವಿಧ ಚಟುವಟಿಕೆಗಳ ಮೂಲಕ ಈ ಶಿಬಿರವು ೫ ದಿನಗಳ ಕಾಲ ನಡೆಯಲಿದ್ದು ಶಿಬಿರಾರ್ಥಿಗಳಿಗೆ ದೇಶಪ್ರೇಮ-ದೇಶಿಯತೆ, ದೇಶೀಯ ಕಲೆಗಳ ಅನಾವರಣ, ಪರಿಸರ ಪ್ರಜ್ಞೆ, ಸಾಹಸ ಕ್ರೀಡೆಗಳು, ಸೌಹಾರ್ದತೆ ಸಾಮರಸ್ಯ ಬದುಕಿನ ತಿಳುವಳಿಕೆ, ಸೌಂದರ್ಯ ಪ್ರಜ್ಞೆ, ಕೃಷಿಯ ಬದುಕು, ಕರಕುಶಲಗಳ ತಿಳುವಳಿಕೆ, ದೇಶೀಯ ಆಹಾರ ಪದಾರ್ಥಗಳ ಪರಿಚಯ, ಶಿಸ್ತು, ಸಮಯಪ್ರಜ್ಞೆ, ಸ್ವಚ್ಛತೆಯ ಪ್ರಾತ್ಯಕ್ಷಿಕೆಗಳ ಕಲಿಕೆ, ಮನೋರಂಜನೆಗಳು, ಯೋಗ, ಪ್ರಾಣಾಯಾಮ ತರಬೇತಿಗಳು, ಸೇವಾ ಮನೋಭಾವನೆ ಮೊದಲಾದ ವಿಚಾರಗಳಲ್ಲಿ ಅರ್ಥಪೂರ್ಣ ತರಬೇತಿ ನೀಡಲಾಗುವುದು.
ಭಾಗವಹಿಸುವ ಶಿಬಿರಾರ್ಥಿಗಳು ದಿನಾಂಕ ೦೯.೧೨.೨೦೨೪ರಂದು ಸಂಜೆ ೫.೦೦ ಗಂಟೆಯ ಒಳಗಾಗಿ ಸ್ಕೌಟ್ಸ್ಸ್-ಗೈಡ್ಸ್ ಕನ್ನಡ ಭವನ, ಸ್ವರಾಜ್ಯ ಮೈದಾನ, ಮೂಡುಬಿದಿರೆ ಇಲ್ಲಿ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು