1:58 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಅಮಾನತುಗೊಂಡ 3 ಮಂದಿ ಅಂಗನವಾಡಿ ಕಾರ್ಯಕರ್ತೆಯರ ಮರುನೇಮಕಕ್ಕೆ ಹೋರಾಟ: ಸಿಐಟಿಯು

05/12/2023, 19:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಯಾರೋ ಮಾಡಿದ ತಪ್ಪಿಗೆ ಕೆಲಸ ಕಳೆದುಕೊಂಡಿದ್ದ ಮೂರು ಮಂದಿ ನೊಂದ ಸಂತ್ರಸ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ನಮ್ಮ ಸಂಘಟನೆಯಿಂದ ಹೋರಾಟ ಮಾಡಿ ಮರುನೇಮಕ ಮಾಡಿಸಲಾಗಿದೆ ಎಂದು ಅಂಗನವಾಡಿ ಸಿಐಟಿಯು ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷೆ ಕಮಲಾಕ್ಷಿ ಹಾಗೂ ಉಪಾಧ್ಯಕ್ಷೆ ಪುಷ್ಪ ತಿಳಿಸಿದ್ದಾರೆ.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಗ್ರಾಮದಲ್ಲಿ ಅಕ್ರಮ ಹಾಲಿನ ಪುಡಿ ಮಾರಾಟ ಮಾಡಿದ್ದಾರೆ ಎಂಬ ಆರೋಪದಲ್ಲಿ ಗ್ರಾಮದ ನಾಗಮ್ಮ, ಶಿವಮ್ಮ, ಹಾಗೂ ಸುಮಾ ಎಂಬ ಅಂಗನವಾಡಿ ಕಾರ್ಯಕರ್ತೆಯರನ್ನು ತನಿಖೆಗೆ ಒಳಪಡಿಸಿ ಸೇವೆಯಿಂದ ಅಮಾನತು ಮಾಡಲಾಗಿತ್ತು.
ಇವರ ಮೇಲೆ ಬಂದ ಆರೋಪ ನಿಜವೋ ಸುಳ್ಳು ಎಂದು ತಿಳಿಯಲು ಇಲಾಖೆ ಅಧಿಕಾರಿಗಳಿಂದ ತನಿಖೆ ನಡೆಸಿ ಇದು ಸುಳ್ಳು ಆರೋಪ ಎಂದು ಗೊತ್ತಾದ ಮೇಲೆ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ನೊಂದ ಸಂತ್ರಸ್ತ ಮಹಿಳೆಯರ ಬೆಂಬಲಕ್ಕೆ ನಿಂತು ನಮ್ಮ ಸಂಘಟನೆಯು ಅವರಿಗೆ ಮತ್ತೆ ಕೆಲಸಕ್ಕೆ ಮರು ನೇಮಕ ಮಾಡಲಾಯಿತು.

ಇವರ ನೇಮಕವನ್ನು ಸಹಿಸದ ಕೆಲವರು ಅಧಿಕಾರಿಗಳಿಗೆ ಹಣ ನೀಡಿ ನೇಮಕ ಮಾಡಿಕೊಂಡಿದ್ದಾರೆ ಎಂದು ನಮ್ಮ ಅಧಿಕಾರಿಗಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಷಯ ವಾಗಿದೆ ಎಂದರು.
ಜೀವನ ನಡೆಸುವುದೇ ಕಷ್ಟದ ಪರಿಸ್ಥಿತಿಯಲ್ಲಿರುವ ಸಂತ್ರಸ್ತರು ಹಣ ಎಲ್ಲಿಂದ ನೀಡುತ್ತಾರೆ ಎಂದು ಪ್ರಶ್ನಿಸಿದರು.
ನಮ್ಮ ಸಂಘಟನೆಯ ಹೋರಾಟದ ಫಲವೇ ಇಂದು ಸಂತ್ರಸ್ತರನ್ನು ಮತ್ತೆ ಕೆಲಸಕ್ಕೆ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಕಾರ್ಯದರ್ಶಿ ಹೇಮಾ, ಉಪಾಧ್ಯಕ್ಷೆ ಪುಷ್ಪ, ಖಜಾಂಚಿ ಮಹಾಲಕ್ಷ್ಮಿ, ಸಂತ್ರಸ್ಯರಾದ ನಾಗಮ್ಮ, ಶಿವಮ್ಮ, ಸುಮಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು