6:53 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಮಾನತುಗೊಂಡ 3 ಮಂದಿ ಅಂಗನವಾಡಿ ಕಾರ್ಯಕರ್ತೆಯರ ಮರುನೇಮಕಕ್ಕೆ ಹೋರಾಟ: ಸಿಐಟಿಯು

05/12/2023, 19:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಯಾರೋ ಮಾಡಿದ ತಪ್ಪಿಗೆ ಕೆಲಸ ಕಳೆದುಕೊಂಡಿದ್ದ ಮೂರು ಮಂದಿ ನೊಂದ ಸಂತ್ರಸ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ನಮ್ಮ ಸಂಘಟನೆಯಿಂದ ಹೋರಾಟ ಮಾಡಿ ಮರುನೇಮಕ ಮಾಡಿಸಲಾಗಿದೆ ಎಂದು ಅಂಗನವಾಡಿ ಸಿಐಟಿಯು ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷೆ ಕಮಲಾಕ್ಷಿ ಹಾಗೂ ಉಪಾಧ್ಯಕ್ಷೆ ಪುಷ್ಪ ತಿಳಿಸಿದ್ದಾರೆ.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಗ್ರಾಮದಲ್ಲಿ ಅಕ್ರಮ ಹಾಲಿನ ಪುಡಿ ಮಾರಾಟ ಮಾಡಿದ್ದಾರೆ ಎಂಬ ಆರೋಪದಲ್ಲಿ ಗ್ರಾಮದ ನಾಗಮ್ಮ, ಶಿವಮ್ಮ, ಹಾಗೂ ಸುಮಾ ಎಂಬ ಅಂಗನವಾಡಿ ಕಾರ್ಯಕರ್ತೆಯರನ್ನು ತನಿಖೆಗೆ ಒಳಪಡಿಸಿ ಸೇವೆಯಿಂದ ಅಮಾನತು ಮಾಡಲಾಗಿತ್ತು.
ಇವರ ಮೇಲೆ ಬಂದ ಆರೋಪ ನಿಜವೋ ಸುಳ್ಳು ಎಂದು ತಿಳಿಯಲು ಇಲಾಖೆ ಅಧಿಕಾರಿಗಳಿಂದ ತನಿಖೆ ನಡೆಸಿ ಇದು ಸುಳ್ಳು ಆರೋಪ ಎಂದು ಗೊತ್ತಾದ ಮೇಲೆ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ನೊಂದ ಸಂತ್ರಸ್ತ ಮಹಿಳೆಯರ ಬೆಂಬಲಕ್ಕೆ ನಿಂತು ನಮ್ಮ ಸಂಘಟನೆಯು ಅವರಿಗೆ ಮತ್ತೆ ಕೆಲಸಕ್ಕೆ ಮರು ನೇಮಕ ಮಾಡಲಾಯಿತು.

ಇವರ ನೇಮಕವನ್ನು ಸಹಿಸದ ಕೆಲವರು ಅಧಿಕಾರಿಗಳಿಗೆ ಹಣ ನೀಡಿ ನೇಮಕ ಮಾಡಿಕೊಂಡಿದ್ದಾರೆ ಎಂದು ನಮ್ಮ ಅಧಿಕಾರಿಗಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಷಯ ವಾಗಿದೆ ಎಂದರು.
ಜೀವನ ನಡೆಸುವುದೇ ಕಷ್ಟದ ಪರಿಸ್ಥಿತಿಯಲ್ಲಿರುವ ಸಂತ್ರಸ್ತರು ಹಣ ಎಲ್ಲಿಂದ ನೀಡುತ್ತಾರೆ ಎಂದು ಪ್ರಶ್ನಿಸಿದರು.
ನಮ್ಮ ಸಂಘಟನೆಯ ಹೋರಾಟದ ಫಲವೇ ಇಂದು ಸಂತ್ರಸ್ತರನ್ನು ಮತ್ತೆ ಕೆಲಸಕ್ಕೆ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಕಾರ್ಯದರ್ಶಿ ಹೇಮಾ, ಉಪಾಧ್ಯಕ್ಷೆ ಪುಷ್ಪ, ಖಜಾಂಚಿ ಮಹಾಲಕ್ಷ್ಮಿ, ಸಂತ್ರಸ್ಯರಾದ ನಾಗಮ್ಮ, ಶಿವಮ್ಮ, ಸುಮಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು