3:05 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಅಮಾನತುಗೊಂಡ 3 ಮಂದಿ ಅಂಗನವಾಡಿ ಕಾರ್ಯಕರ್ತೆಯರ ಮರುನೇಮಕಕ್ಕೆ ಹೋರಾಟ: ಸಿಐಟಿಯು

05/12/2023, 19:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಯಾರೋ ಮಾಡಿದ ತಪ್ಪಿಗೆ ಕೆಲಸ ಕಳೆದುಕೊಂಡಿದ್ದ ಮೂರು ಮಂದಿ ನೊಂದ ಸಂತ್ರಸ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ನಮ್ಮ ಸಂಘಟನೆಯಿಂದ ಹೋರಾಟ ಮಾಡಿ ಮರುನೇಮಕ ಮಾಡಿಸಲಾಗಿದೆ ಎಂದು ಅಂಗನವಾಡಿ ಸಿಐಟಿಯು ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷೆ ಕಮಲಾಕ್ಷಿ ಹಾಗೂ ಉಪಾಧ್ಯಕ್ಷೆ ಪುಷ್ಪ ತಿಳಿಸಿದ್ದಾರೆ.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಗ್ರಾಮದಲ್ಲಿ ಅಕ್ರಮ ಹಾಲಿನ ಪುಡಿ ಮಾರಾಟ ಮಾಡಿದ್ದಾರೆ ಎಂಬ ಆರೋಪದಲ್ಲಿ ಗ್ರಾಮದ ನಾಗಮ್ಮ, ಶಿವಮ್ಮ, ಹಾಗೂ ಸುಮಾ ಎಂಬ ಅಂಗನವಾಡಿ ಕಾರ್ಯಕರ್ತೆಯರನ್ನು ತನಿಖೆಗೆ ಒಳಪಡಿಸಿ ಸೇವೆಯಿಂದ ಅಮಾನತು ಮಾಡಲಾಗಿತ್ತು.
ಇವರ ಮೇಲೆ ಬಂದ ಆರೋಪ ನಿಜವೋ ಸುಳ್ಳು ಎಂದು ತಿಳಿಯಲು ಇಲಾಖೆ ಅಧಿಕಾರಿಗಳಿಂದ ತನಿಖೆ ನಡೆಸಿ ಇದು ಸುಳ್ಳು ಆರೋಪ ಎಂದು ಗೊತ್ತಾದ ಮೇಲೆ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ನೊಂದ ಸಂತ್ರಸ್ತ ಮಹಿಳೆಯರ ಬೆಂಬಲಕ್ಕೆ ನಿಂತು ನಮ್ಮ ಸಂಘಟನೆಯು ಅವರಿಗೆ ಮತ್ತೆ ಕೆಲಸಕ್ಕೆ ಮರು ನೇಮಕ ಮಾಡಲಾಯಿತು.

ಇವರ ನೇಮಕವನ್ನು ಸಹಿಸದ ಕೆಲವರು ಅಧಿಕಾರಿಗಳಿಗೆ ಹಣ ನೀಡಿ ನೇಮಕ ಮಾಡಿಕೊಂಡಿದ್ದಾರೆ ಎಂದು ನಮ್ಮ ಅಧಿಕಾರಿಗಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಷಯ ವಾಗಿದೆ ಎಂದರು.
ಜೀವನ ನಡೆಸುವುದೇ ಕಷ್ಟದ ಪರಿಸ್ಥಿತಿಯಲ್ಲಿರುವ ಸಂತ್ರಸ್ತರು ಹಣ ಎಲ್ಲಿಂದ ನೀಡುತ್ತಾರೆ ಎಂದು ಪ್ರಶ್ನಿಸಿದರು.
ನಮ್ಮ ಸಂಘಟನೆಯ ಹೋರಾಟದ ಫಲವೇ ಇಂದು ಸಂತ್ರಸ್ತರನ್ನು ಮತ್ತೆ ಕೆಲಸಕ್ಕೆ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಕಾರ್ಯದರ್ಶಿ ಹೇಮಾ, ಉಪಾಧ್ಯಕ್ಷೆ ಪುಷ್ಪ, ಖಜಾಂಚಿ ಮಹಾಲಕ್ಷ್ಮಿ, ಸಂತ್ರಸ್ಯರಾದ ನಾಗಮ್ಮ, ಶಿವಮ್ಮ, ಸುಮಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು