10:14 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಅಮಾನತುಗೊಂಡ 3 ಮಂದಿ ಅಂಗನವಾಡಿ ಕಾರ್ಯಕರ್ತೆಯರ ಮರುನೇಮಕಕ್ಕೆ ಹೋರಾಟ: ಸಿಐಟಿಯು

05/12/2023, 19:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಯಾರೋ ಮಾಡಿದ ತಪ್ಪಿಗೆ ಕೆಲಸ ಕಳೆದುಕೊಂಡಿದ್ದ ಮೂರು ಮಂದಿ ನೊಂದ ಸಂತ್ರಸ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ನಮ್ಮ ಸಂಘಟನೆಯಿಂದ ಹೋರಾಟ ಮಾಡಿ ಮರುನೇಮಕ ಮಾಡಿಸಲಾಗಿದೆ ಎಂದು ಅಂಗನವಾಡಿ ಸಿಐಟಿಯು ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷೆ ಕಮಲಾಕ್ಷಿ ಹಾಗೂ ಉಪಾಧ್ಯಕ್ಷೆ ಪುಷ್ಪ ತಿಳಿಸಿದ್ದಾರೆ.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಗ್ರಾಮದಲ್ಲಿ ಅಕ್ರಮ ಹಾಲಿನ ಪುಡಿ ಮಾರಾಟ ಮಾಡಿದ್ದಾರೆ ಎಂಬ ಆರೋಪದಲ್ಲಿ ಗ್ರಾಮದ ನಾಗಮ್ಮ, ಶಿವಮ್ಮ, ಹಾಗೂ ಸುಮಾ ಎಂಬ ಅಂಗನವಾಡಿ ಕಾರ್ಯಕರ್ತೆಯರನ್ನು ತನಿಖೆಗೆ ಒಳಪಡಿಸಿ ಸೇವೆಯಿಂದ ಅಮಾನತು ಮಾಡಲಾಗಿತ್ತು.
ಇವರ ಮೇಲೆ ಬಂದ ಆರೋಪ ನಿಜವೋ ಸುಳ್ಳು ಎಂದು ತಿಳಿಯಲು ಇಲಾಖೆ ಅಧಿಕಾರಿಗಳಿಂದ ತನಿಖೆ ನಡೆಸಿ ಇದು ಸುಳ್ಳು ಆರೋಪ ಎಂದು ಗೊತ್ತಾದ ಮೇಲೆ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ನೊಂದ ಸಂತ್ರಸ್ತ ಮಹಿಳೆಯರ ಬೆಂಬಲಕ್ಕೆ ನಿಂತು ನಮ್ಮ ಸಂಘಟನೆಯು ಅವರಿಗೆ ಮತ್ತೆ ಕೆಲಸಕ್ಕೆ ಮರು ನೇಮಕ ಮಾಡಲಾಯಿತು.

ಇವರ ನೇಮಕವನ್ನು ಸಹಿಸದ ಕೆಲವರು ಅಧಿಕಾರಿಗಳಿಗೆ ಹಣ ನೀಡಿ ನೇಮಕ ಮಾಡಿಕೊಂಡಿದ್ದಾರೆ ಎಂದು ನಮ್ಮ ಅಧಿಕಾರಿಗಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಷಯ ವಾಗಿದೆ ಎಂದರು.
ಜೀವನ ನಡೆಸುವುದೇ ಕಷ್ಟದ ಪರಿಸ್ಥಿತಿಯಲ್ಲಿರುವ ಸಂತ್ರಸ್ತರು ಹಣ ಎಲ್ಲಿಂದ ನೀಡುತ್ತಾರೆ ಎಂದು ಪ್ರಶ್ನಿಸಿದರು.
ನಮ್ಮ ಸಂಘಟನೆಯ ಹೋರಾಟದ ಫಲವೇ ಇಂದು ಸಂತ್ರಸ್ತರನ್ನು ಮತ್ತೆ ಕೆಲಸಕ್ಕೆ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಕಾರ್ಯದರ್ಶಿ ಹೇಮಾ, ಉಪಾಧ್ಯಕ್ಷೆ ಪುಷ್ಪ, ಖಜಾಂಚಿ ಮಹಾಲಕ್ಷ್ಮಿ, ಸಂತ್ರಸ್ಯರಾದ ನಾಗಮ್ಮ, ಶಿವಮ್ಮ, ಸುಮಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು