5:30 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಅಮರಾವತಿ: ಟ್ಯಾಂಕರ್ ಸ್ವಚ್ಛಗೊಳಿಸುವಾಗ ವಿಷಾನಿಲ ಸೇವನೆ; 7 ಮಂದಿ ಕಾರ್ಮಿಕರು ದಾರುಣ ಸಾವು

09/02/2023, 21:23

ಕಾಕಿನಾಡ(reporterkarnataka.com): ಅಮರಾವತಿ ಜಿಲ್ಲೆಯ ಪೆದ್ದಾಪುರಂ ಮಂಡಲದ ಜಿ.ರಾಗಂಪೇಟೆಯಲ್ಲಿರುವ ಖಾದ್ಯ ತೈಲ ತಯಾರಿಕಾ ಕಂಪನಿಯೊಂದರ ಟ್ಯಾಂಕರ್‌ಗಳನ್ನು ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲವನ್ನು ಸೇವಿಸಿ 7 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಹಲವರು ಅಸ್ವಸ್ಥಗೊಂಡ ದಾರುಣ ಘಟನೆ ನಡೆದಿದೆ.

ಮೃತರನ್ನು ವೇಚಂಗಿ ಕೃಷ್ಣ, ವೆಚ್ಚಂಗಿ ನರಸಿಂಹಂ, ವೇಚಂಗಿ ಸಾಗರ್, ಕೊರತಾಡು ಬಂಜಿ ಬಾಬು, ಕರ್ರಿ ರಾಮರಾವ್, ಪ್ರಸಾದ್ ಮತ್ತು ಕಟ್ಟಮುರಿ ಜಗದೀಶ್ ಎಂದು ಗುರುತಿಸಲಾಗಿದೆ.

ಅಂಬಟಿ ಸುಬ್ಬಣ್ಣ ಎಣ್ಣೆ ಕಾರ್ಖಾನೆ ಆವರಣದಲ್ಲಿ ಈ ಘಟನೆ ನಡೆದಿದೆ. ಕಾರ್ಮಿಕರು 24 ಅಡಿ ಆಳದ ತೈಲ ಟ್ಯಾಂಕರ್ ಸ್ವಚ್ಛಗೊಳಿಸಲು ಒಬ್ಬೊಬ್ಬರಾಗಿ ಪ್ರವೇಶಿಸಿದ್ದು, ಅದರಲ್ಲಿದ್ದ ವಿಷಕಾರಿ ಅನಿಲವನ್ನು ಸೇವಿಸಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ 5 ಮಂದಿ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಪಾಡೇರು ನಿವಾಸಿಗಳಾಗಿದ್ದು, ಇಬ್ಬರು ಅದೇ ಮಂಡಲದ ಪುಲಿಮೇರು ಗ್ರಾಮದವರು ಎಂದು ತಿಳಿದು ಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ರವೀಂದ್ರನಾಥ ಬಾಬು, ಜಿಲ್ಲಾಧಿಕಾರಿ ಕೃತಿಕಾ ಶುಕ್ಲಾ ಕೂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ತೈಲ ಕಾರ್ಖಾನೆಯ ಆಡಳಿತ ಮಂಡಳಿ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು