9:27 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಅಂಬಲಪಾಡಿ: ವಾಹನ ಸವಾರರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮನವಿ

10/01/2025, 09:44

ಉಡುಪಿ(reporter Karnataka.com): ಜಿಲ್ಲೆಯ ಉಡುಪಿ ನಗರಸಭಾ ವ್ಯಾಪ್ತಿಯ ಅಂಬಲಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು ಸೂಕ್ತ ಬ್ಯಾರಿಕೇಡ್ ಹಾಗೂ ಸುರಕ್ಷತಾ ಕ್ರಮಗಳನ್ನು ಅಳವಡಿಸದೆ ಇರುವುದರಿಂದ ಪ್ರಯಾಣಿಕರ ಜೀವಕ್ಕೆ ಸಂಕಷ್ಟವಾಗಿರುತ್ತದೆ. ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪತ್ರ ಮುಖೇನ ಮನವಿ ಮಾಡಿದ್ದಾರೆ.
ಈಗಾಗಲೇ ಉಡುಪಿ ಹತ್ತಿರದ ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯಿಂದಾಗಿ ಅನೇಕ ಅವಘಡಗಳು ಸಂಭವಿಸಿದ್ದರೂ ಕೂಡಾ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ಅಧಿಕಾರಿಗಳು ಅಂಬಲಪಾಡಿ ಫ್ಲೈ ಓವರ್ ಕಾಮಗಾರಿ ಪ್ರಾರಂಭದ ಹಂತದಲ್ಲಿ ಮುಂಜಾಗ್ರತೆ ವಹಿಸಿರುವುದಿಲ್ಲ.
ಇದರಿಂದಾಗಿ ನಿರ್ಮಾಣವಾದ ದೊಡ್ಡ ಗಾತ್ರದ ಹೊಂಡಗಳಲ್ಲಿ ವಾಹನಗಳು ಉರುಳಿ ಅಪಘಾತವಾಗುತ್ತಿದ್ದು ಈ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಆದ್ದರಿಂದ ಕಾಮಗಾರಿ ಹಂತದಲ್ಲಿ ನಿರ್ಲಕ್ಷ್ಯತೆ ವಹಿಸಿರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವ ಜೊತೆಗೆ ಸುರಕ್ಷತಾ ದೃಷ್ಟಿಯಿಂದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಸೂಚನ ಫಲಕಗಳನ್ನು ಅಳವಡಿಸಬೇಕಾಗಿ ಮನವಿಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು