11:05 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಅಂಬೇಡ್ಕರ್ ಅವರನ್ನು ಒಂದು ಪಂಗಡಕ್ಕೆ ಸೀಮಿತಗೊಳಿಸುತ್ತಿರುವುದು ದುರದೃಷ್ಟಕರ: ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ

14/01/2025, 21:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಲವು ಪ್ರತ್ಯೇಕವಾದಿ ಮನಸುಗಳು ಭಾಷಣ ಮಾಡುವ ನೆಪದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಅವರನ್ನು ಒಂದು ವರ್ಗ ಪಂಗಡಕಕ್ಕೆ ಸೀಮಿತ ಗೊಳಿಸುತ್ತಿರುವುದು ದುರದೃಷ್ಟಕರ ಎಂದು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ ಹೇಳಿದ್ದಾರೆ.
ಅವರು ಹೇಳಿಕೆಯಲ್ಲಿ ತಿಳಿಸಿ ಕಳೆದ ವಾರ ಭೀಮ ಕೋರೆಗಾವ್ ವಿಜಯೋತ್ಸವವನ್ನು ಮೂಡಿಗೆರೆಯಲ್ಲಿ ಎಲ್ಲಾ ಜನಾಂಗ ಮತ್ತು ಪಕ್ಷದ ಪ್ರಮುಖರು ಸೇರಿಕೊಂಡು ವಿಜ್ರಂಭಣೆಯಿಂದ ಆಚರಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿತ್ತು. ಇದರ ಮಧ್ಯೆ ಅಂಬೇಡ್ಕರ್ ಧ್ಯೇಯ ಸಿದ್ಧಾಂತ, ಭೀಮಾ ಕೋರೆಗಾವ್ ಯುದ್ಧದ ಇತಿಹಾಸ ಮತ್ತು ದೇಶದ ಜನತೆಗೆ ಬಾಬಾಸಾಹೇಬರು ನೀಡಿದ ಕೊಡುಗೆಯನ್ನು ವಿಶ್ವಕ್ಕೆ ಸಾರಬೇಕಾದ ಹಾಗು ದಿನವು ಇವರ ಮಾನವಿಯ ಮೌಲ್ಯವನ್ನು ಹೆಚ್ಚಿಸಬೇಕಾದ ಈ ದಿನಗಳಲ್ಲಿ ಪ್ರಮುಖ ಭಾಷಣಕಾರ ಅಂದು ಸಮಾಜವನ್ನು ಒಡೆಯುವ ಮನಸ್ಥಿತಿಯ ಯೋಜನೆಯೊಂದಿಗೆ ಬಿಜೆಪಿ ಸಂಘ ಪರಿವಾರ ಮತ್ತು ಕೆಲವು ಜಾತಿ ಸಮಾಜದವರನ್ನು ದೋಷಿಸುವುದಕ್ಕೆ ಬಳಸಿಕೊಂಡಿದ್ದು ನಾಚಿಕೆಗೇಡು. ಇದು ಭಾರತರತ್ನಗೆ ಮಾಡಿದ ಅವಮಾನ. ವಿದೇಶಿಯರು ಮತ್ತು ಭಾರತೀಯರು ದೇಶಭಕ್ತ, ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರಿಗೆ ಯಾವುದೇ ಜಾತಿ ಮತ ಭೇದವಿಲ್ಲದೆ ಗೌರವ ನೀಡುತ್ತಿದ್ದು. ಇದೆಲ್ಲವನ್ನು ಗೊತ್ತಿದ್ದರು ಸಮಾಜ ಒಡೆಯುವ ಕಾರ್ಖಾನೆಯಲ್ಲಿ ಪಳಗಿಕೊಂಡು. ಇನ್ನೊಬ್ಬರ ಸಿದ್ದಾಂತದ ಅಳ ತಿಳಿಯದೆ ಪ್ರಶಸ್ತಿ. ಅಧಿಕಾರದ ಆಸೆಗೆ.ಮಲೆನಾಡಿನ ಒಗ್ಗಟ್ಟನ್ನು ಒಡೆಯುವ ಕುತಂತ್ರ ಮಾಡುತ್ತಿದ್ದು. ಜೊತೆಗೆ ಇವರಿಗೆ ಕುಮ್ಮಕ್ಕು ಕೊಡುವ ಮನಸ್ಥಿತಿಯವರು ಜೈಕಾರ ಹಾಕುತಿರುವುದು ಖಂಡನೀಯ. ದೇಶದಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಅನಿಷ್ಠಗಳನ್ನು ಖಂಡಿಸುವ ಕಾರ್ಯವಾಗಬೇಕೆ ಹೊರತು ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವ ಕೆಲಸ ಬೇಡ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು