4:13 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಅಂಬೇಡ್ಕರ್ ಅವರನ್ನು ಒಂದು ಪಂಗಡಕ್ಕೆ ಸೀಮಿತಗೊಳಿಸುತ್ತಿರುವುದು ದುರದೃಷ್ಟಕರ: ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ

14/01/2025, 21:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಲವು ಪ್ರತ್ಯೇಕವಾದಿ ಮನಸುಗಳು ಭಾಷಣ ಮಾಡುವ ನೆಪದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಅವರನ್ನು ಒಂದು ವರ್ಗ ಪಂಗಡಕಕ್ಕೆ ಸೀಮಿತ ಗೊಳಿಸುತ್ತಿರುವುದು ದುರದೃಷ್ಟಕರ ಎಂದು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ ಹೇಳಿದ್ದಾರೆ.
ಅವರು ಹೇಳಿಕೆಯಲ್ಲಿ ತಿಳಿಸಿ ಕಳೆದ ವಾರ ಭೀಮ ಕೋರೆಗಾವ್ ವಿಜಯೋತ್ಸವವನ್ನು ಮೂಡಿಗೆರೆಯಲ್ಲಿ ಎಲ್ಲಾ ಜನಾಂಗ ಮತ್ತು ಪಕ್ಷದ ಪ್ರಮುಖರು ಸೇರಿಕೊಂಡು ವಿಜ್ರಂಭಣೆಯಿಂದ ಆಚರಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿತ್ತು. ಇದರ ಮಧ್ಯೆ ಅಂಬೇಡ್ಕರ್ ಧ್ಯೇಯ ಸಿದ್ಧಾಂತ, ಭೀಮಾ ಕೋರೆಗಾವ್ ಯುದ್ಧದ ಇತಿಹಾಸ ಮತ್ತು ದೇಶದ ಜನತೆಗೆ ಬಾಬಾಸಾಹೇಬರು ನೀಡಿದ ಕೊಡುಗೆಯನ್ನು ವಿಶ್ವಕ್ಕೆ ಸಾರಬೇಕಾದ ಹಾಗು ದಿನವು ಇವರ ಮಾನವಿಯ ಮೌಲ್ಯವನ್ನು ಹೆಚ್ಚಿಸಬೇಕಾದ ಈ ದಿನಗಳಲ್ಲಿ ಪ್ರಮುಖ ಭಾಷಣಕಾರ ಅಂದು ಸಮಾಜವನ್ನು ಒಡೆಯುವ ಮನಸ್ಥಿತಿಯ ಯೋಜನೆಯೊಂದಿಗೆ ಬಿಜೆಪಿ ಸಂಘ ಪರಿವಾರ ಮತ್ತು ಕೆಲವು ಜಾತಿ ಸಮಾಜದವರನ್ನು ದೋಷಿಸುವುದಕ್ಕೆ ಬಳಸಿಕೊಂಡಿದ್ದು ನಾಚಿಕೆಗೇಡು. ಇದು ಭಾರತರತ್ನಗೆ ಮಾಡಿದ ಅವಮಾನ. ವಿದೇಶಿಯರು ಮತ್ತು ಭಾರತೀಯರು ದೇಶಭಕ್ತ, ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರಿಗೆ ಯಾವುದೇ ಜಾತಿ ಮತ ಭೇದವಿಲ್ಲದೆ ಗೌರವ ನೀಡುತ್ತಿದ್ದು. ಇದೆಲ್ಲವನ್ನು ಗೊತ್ತಿದ್ದರು ಸಮಾಜ ಒಡೆಯುವ ಕಾರ್ಖಾನೆಯಲ್ಲಿ ಪಳಗಿಕೊಂಡು. ಇನ್ನೊಬ್ಬರ ಸಿದ್ದಾಂತದ ಅಳ ತಿಳಿಯದೆ ಪ್ರಶಸ್ತಿ. ಅಧಿಕಾರದ ಆಸೆಗೆ.ಮಲೆನಾಡಿನ ಒಗ್ಗಟ್ಟನ್ನು ಒಡೆಯುವ ಕುತಂತ್ರ ಮಾಡುತ್ತಿದ್ದು. ಜೊತೆಗೆ ಇವರಿಗೆ ಕುಮ್ಮಕ್ಕು ಕೊಡುವ ಮನಸ್ಥಿತಿಯವರು ಜೈಕಾರ ಹಾಕುತಿರುವುದು ಖಂಡನೀಯ. ದೇಶದಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಅನಿಷ್ಠಗಳನ್ನು ಖಂಡಿಸುವ ಕಾರ್ಯವಾಗಬೇಕೆ ಹೊರತು ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವ ಕೆಲಸ ಬೇಡ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು