9:24 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಅಂಬೇಡ್ಕರ್ ಅವರನ್ನು ಒಂದು ಪಂಗಡಕ್ಕೆ ಸೀಮಿತಗೊಳಿಸುತ್ತಿರುವುದು ದುರದೃಷ್ಟಕರ: ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ

14/01/2025, 21:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಲವು ಪ್ರತ್ಯೇಕವಾದಿ ಮನಸುಗಳು ಭಾಷಣ ಮಾಡುವ ನೆಪದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಅವರನ್ನು ಒಂದು ವರ್ಗ ಪಂಗಡಕಕ್ಕೆ ಸೀಮಿತ ಗೊಳಿಸುತ್ತಿರುವುದು ದುರದೃಷ್ಟಕರ ಎಂದು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ ಹೇಳಿದ್ದಾರೆ.
ಅವರು ಹೇಳಿಕೆಯಲ್ಲಿ ತಿಳಿಸಿ ಕಳೆದ ವಾರ ಭೀಮ ಕೋರೆಗಾವ್ ವಿಜಯೋತ್ಸವವನ್ನು ಮೂಡಿಗೆರೆಯಲ್ಲಿ ಎಲ್ಲಾ ಜನಾಂಗ ಮತ್ತು ಪಕ್ಷದ ಪ್ರಮುಖರು ಸೇರಿಕೊಂಡು ವಿಜ್ರಂಭಣೆಯಿಂದ ಆಚರಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿತ್ತು. ಇದರ ಮಧ್ಯೆ ಅಂಬೇಡ್ಕರ್ ಧ್ಯೇಯ ಸಿದ್ಧಾಂತ, ಭೀಮಾ ಕೋರೆಗಾವ್ ಯುದ್ಧದ ಇತಿಹಾಸ ಮತ್ತು ದೇಶದ ಜನತೆಗೆ ಬಾಬಾಸಾಹೇಬರು ನೀಡಿದ ಕೊಡುಗೆಯನ್ನು ವಿಶ್ವಕ್ಕೆ ಸಾರಬೇಕಾದ ಹಾಗು ದಿನವು ಇವರ ಮಾನವಿಯ ಮೌಲ್ಯವನ್ನು ಹೆಚ್ಚಿಸಬೇಕಾದ ಈ ದಿನಗಳಲ್ಲಿ ಪ್ರಮುಖ ಭಾಷಣಕಾರ ಅಂದು ಸಮಾಜವನ್ನು ಒಡೆಯುವ ಮನಸ್ಥಿತಿಯ ಯೋಜನೆಯೊಂದಿಗೆ ಬಿಜೆಪಿ ಸಂಘ ಪರಿವಾರ ಮತ್ತು ಕೆಲವು ಜಾತಿ ಸಮಾಜದವರನ್ನು ದೋಷಿಸುವುದಕ್ಕೆ ಬಳಸಿಕೊಂಡಿದ್ದು ನಾಚಿಕೆಗೇಡು. ಇದು ಭಾರತರತ್ನಗೆ ಮಾಡಿದ ಅವಮಾನ. ವಿದೇಶಿಯರು ಮತ್ತು ಭಾರತೀಯರು ದೇಶಭಕ್ತ, ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರಿಗೆ ಯಾವುದೇ ಜಾತಿ ಮತ ಭೇದವಿಲ್ಲದೆ ಗೌರವ ನೀಡುತ್ತಿದ್ದು. ಇದೆಲ್ಲವನ್ನು ಗೊತ್ತಿದ್ದರು ಸಮಾಜ ಒಡೆಯುವ ಕಾರ್ಖಾನೆಯಲ್ಲಿ ಪಳಗಿಕೊಂಡು. ಇನ್ನೊಬ್ಬರ ಸಿದ್ದಾಂತದ ಅಳ ತಿಳಿಯದೆ ಪ್ರಶಸ್ತಿ. ಅಧಿಕಾರದ ಆಸೆಗೆ.ಮಲೆನಾಡಿನ ಒಗ್ಗಟ್ಟನ್ನು ಒಡೆಯುವ ಕುತಂತ್ರ ಮಾಡುತ್ತಿದ್ದು. ಜೊತೆಗೆ ಇವರಿಗೆ ಕುಮ್ಮಕ್ಕು ಕೊಡುವ ಮನಸ್ಥಿತಿಯವರು ಜೈಕಾರ ಹಾಕುತಿರುವುದು ಖಂಡನೀಯ. ದೇಶದಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಅನಿಷ್ಠಗಳನ್ನು ಖಂಡಿಸುವ ಕಾರ್ಯವಾಗಬೇಕೆ ಹೊರತು ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವ ಕೆಲಸ ಬೇಡ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು