4:17 PM Wednesday13 - August 2025
ಬ್ರೇಕಿಂಗ್ ನ್ಯೂಸ್
ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

16/04/2025, 11:45

ಪುತ್ತೂರು(reporterkarnataka.com): ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಮುಂದಾಳತ್ವದಲ್ಲಿ ರಚಿಸಲಾದ ಭಾರತೀಯ ಸಂವಿಧಾನವು ಪ್ರಜಾಪ್ರಭುತ್ವ, ಸಮಾನತೆ, ಸಾಮಾಜಿಕ ನ್ಯಾಯ ಎಂಬಿತ್ಯಾದಿ ವಿಚಾರಗಳನ್ನು ಪ್ರತಿಪಾದಿಸುತ್ತದೆ. ಸಂವಿಧಾನವನ್ನು ಗೌರವಿಸುವುದು ಹಾಗೂ ರಕ್ಷಿಸುವುದು ವಿದ್ಯಾರ್ಥಿಗಳ ಕರ್ತವ್ಯ ಎಂದು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ||ವಿಜಯ ಕುಮಾರ್ ಎಂ ಅವರು ಹೇಳಿದರು.


ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕವು ಆಯೋಜಿಸಿದ ‘ಅಂಬೇಡ್ಕರ್ ಜಯಂತಿ’ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಎನ್ಎಸ್ಎಸ್ ಅಧಿಕಾರಿಯಾದ ಡಾ||ಚಂದ್ರಶೇಖರ ಕೆ. ಅವರು ಮಾತನಾಡುತ್ತಾ ” ಸಂವಿಧಾನವು ನಮಗೆ ಹಕ್ಕು ಮತ್ತು ಕರ್ತವ್ಯಗಳು ಎರಡನ್ನೂ ಕೊಟ್ಟಿದೆ. ನಾವು ಹಕ್ಕುಗಳನ್ನು ಹೇಗೆ ಬಯಸುತ್ತೇವೆಯೋ ಅದೇ ರೀತಿ ಕರ್ತವ್ಯಗಳನ್ನು ಪಾಲಿಸುವುದು ಕೂಡ ಅಗತ್ಯ “ಎಂದು ಹೇಳಿದರು.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.
‘ಅಂಬೇಡ್ಕರ್ ಮತ್ತು ಸಂವಿಧಾನ’ ಎಂಬ ವಿಷಯದ ಕುರಿತು ಎನ್ಎಸ್ಎಸ್ ಸ್ವಯಂಸೇವಕಿಯರಾದ ಪುಣ್ಯ, ಗಾಯತ್ರಿ, ಲವಿಕಾ ಇವರು ಪ್ರಬಂಧ ಮಂಡನೆ ಮಾಡಿದರು.
ಗ್ರೀಷ್ಮ ಮತ್ತು ತಂಡದವರು ಪ್ರಾರ್ಥಿಸಿ, ಎನ್ಎಸ್ಎಸ್ ಘಟಕ ನಾಯಕಿ ಅರ್ಚನಾ ಕೆ. ಅವರು ಸ್ವಾಗತಿಸಿದರು. ವಿಷ್ಣುಜಿತ್ ಎಂ. ಅವರು ವಂದಿಸಿದರು. ಘಟಕ ನಾಯಕಿ ಕಾವ್ಯ ಎಚ್. ರಾವ್ ಅವರು ನಿರೂಪಿಸಿದರು.
ಎನ್ಎಸ್ಎಸ್ ಅಧಿಕಾರಿ ಪುಷ್ಪಾ ಎನ್., ಘಟಕ ನಾಯಕ ಕೆವಿನ್, ಕಾರ್ಯದರ್ಶಿ ನಿರಂಜನ್, ಉಪನ್ಯಾಸಕರಾದ ಹರ್ಷಿತ್ ಹಾಗೂ ಪೃಥ್ವಿ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು