10:55 AM Tuesday29 - April 2025
ಬ್ರೇಕಿಂಗ್ ನ್ಯೂಸ್
ದಿವ್ಯಾಂಗರ ಶ್ರೇಯೋಭಿವೃದ್ಧಿಗೆ ಬದ್ಧ: ಸಂಸತ್ತಿನ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಮಿತಿ ಅಧ್ಯಕ್ಷ… Kodagu | ಪಿರಿಯಾಪಟ್ಟಣ: ಒಂದೇ ದಿನ 430 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳ… Belagavi | ಉಗ್ರರ ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕೆಎಸ್ಸಾರ್ಟಿಸಿ ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 1 ಕೋಟಿ ಪರಿಹಾರ: ಕಾಲು ಕಳೆದುಕೊಂಡ ಸಿಬ್ಬಂದಿಗೆ… ಮುಖ್ಯಮಂತ್ರಿ ಮಾತು ಆಘಾತ ತಂದಿದೆ, ಕೂಡಲೇ ಕ್ಷಮೆ ಯಾಚಿಸಲಿ: ಪ್ರತಿಪಕ್ಷ ನಾಯಕ ಆರ್.ಅಶೋಕ್… ಕಲ್ಲಡ್ಕ ಕೇಟಿಗೆ 70ರ ಸಂಭ್ರಮ!: ಹಾಲಿನ ಮೇಲೆ ಲೀಲಾಜಾಲವಾಗಿ ತೇಲುವ ಟೀ ಡಿಕಾಕ್ಷನ್… Opposition Leader | ಬೆಲೆಯೇರಿಕೆ ವಿರುದ್ಧ 3 ದಿನಗಳ ಕಾಲ ಹೋರಾಟ: ಪ್ರತಿಪಕ್ಷ… VHP protest | ಕಾಶ್ಮೀರದಲ್ಲಿ ನರಮೇಧ: ಚಿಕ್ಕಮಗಳೂರಿನಲ್ಲಿ ವಿಎಚ್ ಪಿ ಪ್ರತಿಭಟನೆ; ಉಗ್ರರ… Bangalore | ಇಸ್ರೋ ಮಾಜಿ ಅಧ್ಯಕ್ಷ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಕೆ.… BBMP | ಸಾರ್ವಜನಿಕರಿಂದ ದೂರು ಬಾರದಂತೆ ಘನತ್ಯಾಜ್ಯ ನಿರ್ವಹಣೆ ಮಾಡಿ: ಬಿಬಿಎಂಪಿಗೆ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

16/04/2025, 11:45

ಪುತ್ತೂರು(reporterkarnataka.com): ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಮುಂದಾಳತ್ವದಲ್ಲಿ ರಚಿಸಲಾದ ಭಾರತೀಯ ಸಂವಿಧಾನವು ಪ್ರಜಾಪ್ರಭುತ್ವ, ಸಮಾನತೆ, ಸಾಮಾಜಿಕ ನ್ಯಾಯ ಎಂಬಿತ್ಯಾದಿ ವಿಚಾರಗಳನ್ನು ಪ್ರತಿಪಾದಿಸುತ್ತದೆ. ಸಂವಿಧಾನವನ್ನು ಗೌರವಿಸುವುದು ಹಾಗೂ ರಕ್ಷಿಸುವುದು ವಿದ್ಯಾರ್ಥಿಗಳ ಕರ್ತವ್ಯ ಎಂದು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ||ವಿಜಯ ಕುಮಾರ್ ಎಂ ಅವರು ಹೇಳಿದರು.


ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕವು ಆಯೋಜಿಸಿದ ‘ಅಂಬೇಡ್ಕರ್ ಜಯಂತಿ’ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಎನ್ಎಸ್ಎಸ್ ಅಧಿಕಾರಿಯಾದ ಡಾ||ಚಂದ್ರಶೇಖರ ಕೆ. ಅವರು ಮಾತನಾಡುತ್ತಾ ” ಸಂವಿಧಾನವು ನಮಗೆ ಹಕ್ಕು ಮತ್ತು ಕರ್ತವ್ಯಗಳು ಎರಡನ್ನೂ ಕೊಟ್ಟಿದೆ. ನಾವು ಹಕ್ಕುಗಳನ್ನು ಹೇಗೆ ಬಯಸುತ್ತೇವೆಯೋ ಅದೇ ರೀತಿ ಕರ್ತವ್ಯಗಳನ್ನು ಪಾಲಿಸುವುದು ಕೂಡ ಅಗತ್ಯ “ಎಂದು ಹೇಳಿದರು.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.
‘ಅಂಬೇಡ್ಕರ್ ಮತ್ತು ಸಂವಿಧಾನ’ ಎಂಬ ವಿಷಯದ ಕುರಿತು ಎನ್ಎಸ್ಎಸ್ ಸ್ವಯಂಸೇವಕಿಯರಾದ ಪುಣ್ಯ, ಗಾಯತ್ರಿ, ಲವಿಕಾ ಇವರು ಪ್ರಬಂಧ ಮಂಡನೆ ಮಾಡಿದರು.
ಗ್ರೀಷ್ಮ ಮತ್ತು ತಂಡದವರು ಪ್ರಾರ್ಥಿಸಿ, ಎನ್ಎಸ್ಎಸ್ ಘಟಕ ನಾಯಕಿ ಅರ್ಚನಾ ಕೆ. ಅವರು ಸ್ವಾಗತಿಸಿದರು. ವಿಷ್ಣುಜಿತ್ ಎಂ. ಅವರು ವಂದಿಸಿದರು. ಘಟಕ ನಾಯಕಿ ಕಾವ್ಯ ಎಚ್. ರಾವ್ ಅವರು ನಿರೂಪಿಸಿದರು.
ಎನ್ಎಸ್ಎಸ್ ಅಧಿಕಾರಿ ಪುಷ್ಪಾ ಎನ್., ಘಟಕ ನಾಯಕ ಕೆವಿನ್, ಕಾರ್ಯದರ್ಶಿ ನಿರಂಜನ್, ಉಪನ್ಯಾಸಕರಾದ ಹರ್ಷಿತ್ ಹಾಗೂ ಪೃಥ್ವಿ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು